ಕೆ ಆರ್ ಎಸ್, ಕಬಿನಿಯಿಂದ ಜು.28ಕ್ಕೆ ನಾಲೆಗಳಿಗೆ ನೀರು

ಕೆ ಆರ್ ಎಸ್, ಕಬಿನಿಯಿಂದ ಜು.28ಕ್ಕೆ ನಾಲೆಗಳಿಗೆ ನೀರು

ಕೆ ಆರ್ ಎಸ್, ಮಂಡ್ಯ: ಕಬಿನಿ ಹಾಗೂ ಕೆಆರ್ ಎಸ್ ಜಲಾಶಯದಿಂದ ನಾಲೆಗಳಿಗೆ ಜುಲೈ 28ರಂದು ನೀರು ಹರಿಸಬೇಕು. ಹಾರಂಗಿ ಜಲಾಶಯಗಳಿಂದಲೂ ಅದೇ ದಿನ ಇಲ್ಲವೇ ಆದಷ್ಟು ಶೀಘ್ರವಾಗಿ ನೀರು ಬಿಡಲು ಕ್ರಮ ಕೈಗೊಳ್ಳಿ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಪೌರಾಡಳಿತ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಸಿ.ನಾರಾಯಣ ಗೌಡ ಅಧ್ಯಕ್ಷತೆಯಲ್ಲಿ ಕೆ ಆರ್ ಎಸ್ ಬೃಂದಾವನ ಗಾರ್ಡನ್ ಕಾವೇರಿ ಸಭಾಂಗಣದಲ್ಲಿ ನಡೆದ ಕೃಷ್ಣರಾಜಸಾಗರ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಿಗೆ 2020 ರ ಮುಂಗಾರು ಹಂಗಾಮಿಗೆ ನೀರು ಒದಗಿಸುವ ಬಗ್ಗೆ ಸಭೆಯಲ್ಲಿ ಮಾತನಾಡಿ, ಜುಲೈ 28 ರಿಂದ ನೀರು ಬಿಡಲು ಎಲ್ಲ ಶಾಸಕರು ಒಪ್ಪಿಗೆ ಸೂಚಿದ್ದಾರೆ.

ಕೆಲವು ನಾಲೆಗಳ ದುರಸ್ತಿ ಇದ್ದು, ಇದನ್ನು ಶೀಘ್ರ ಮುಗಿಸಿ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.

ಇನ್ನು ಸವಡೆಗಳಿಗೆ 6 ತಿಂಗಳಿನಿಂದ ವೇತನ ನೀಡದಿರುವ ಬಗ್ಗೆ ಸಭೆಯಲ್ಲಿ ಶಾಸಕರು ಗಮನಕ್ಕೆ ತಂದಿದ್ದಾರೆ. ಇವರಿಗೆ ಶೀಘ್ರದಲ್ಲೇ ವೇತನ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

Related