ಮಾತಿನಲ್ಲೇ ಚಾಟಿ ಬೀಸಿದ ಕೆ.ಎಸ್.ಈಶ್ವರಪ್ಪ

ಮಾತಿನಲ್ಲೇ ಚಾಟಿ ಬೀಸಿದ ಕೆ.ಎಸ್.ಈಶ್ವರಪ್ಪ

ಬೆಂಗಳೂರು: ಲೋಕಸಭಾ ಚುನಾವಣೆಗೆ ಹಾವೇರಿ ಕ್ಷೇತ್ರದಿಂದ ಪುತ್ರ ಕಾಂತೇಶ್ ಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಕೆ.ಎಸ್.ಈಶ್ವರಪ್ಪ ವರಿಷ್ಠರು ಬಿಎಸ್ ಮಾತನಾಡಿ, ಯಡಿಯೂರಪ್ಪ, ಬಿವೈ ವಿಜಯೇಂದ್ರಗೆ ಪ್ರಾಮುಖ್ಯತೆ ಕೊಡ್ತಾರೆ,ಆದರೆ ಇವರು ಇದನ್ನು ದುರ್ಬಳಕೆ ಮಾಡಿಕೊಳ್ತಿದ್ದಾರೆ. ವರಿಷ್ಠರು ಹೇಳಿದ ತಕ್ಷಣ ನಾನು ನಿವೃತ್ತಿ ಘೋಷಿಸಿದೆ, ಆದರೆ ಇವರು ನಮಗೆ ಮನ್ನಣೆ ನೀಡುತ್ತಿಲ್ಲ.
ಕ್ಷೇತ್ರದ ಜನರು ನನ್ನ 5 ಬಾರಿ ಶಾಸಕರನ್ನಾಗಿ ಮಾಡಿದ್ದಾರೆ, ನನಗೆ ಯಾವುದೇ ತೊಂದರೆ ಇಲ್ಲ. ಇದೇ ಬಿಎಸ್ ವೈ ನನಗೆ ಭರವಸೆಯನ್ನ ನೀಡಿದ್ದರು. ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿದ್ದರು. ನಾನು ಕಾಂತೇಶ್ ಇಬ್ಬರೂ ಯಡಿಯೂರಪ್ಪ ಮನೆಗೆ ಹೋದಾಗ ಬಹಳ ಸ್ಪಷ್ಟವಾಗಿ ಹೇಳಿದ್ದರು. ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಕಾಂತೇಶ ಅವರಿಗೆ ಟಿಕೆಟ್ ಕೊಡಿಸುವುದು ಪಕ್ಕ ಅಂತ ಹೇಳಿದ್ದರು. ಆದರೆ ಯಡಿಯೂರಪ್ಪನವರ ಹಾಗೂ ಅವರ ಮಗ ಷಡ್ಯಂತ್ರ ಮಾಡಿ ನನ್ನ ಮಗನಿಗೆ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ತಪ್ಪಿಸಿದ್ದಾರೆ. ಈಗ ಎಂಎಲ್ ಸಿ ಮಾಡುತ್ತೇನೆ ಎಂದಿದ್ದಾರೆ ನಾನು ನಂಬಲ್ಲ ಎಂದರು.
ಇಂದು ನಮ್ಮ ಬೆಂಬಲಿಗರು ಸಭೆ ಕರೆದಿದ್ದಾರೆ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಈಶ್ವರಪ್ಪ ಖಡಕ್ ಆಗಿ ಸಂದೇಶ ರವಾನಿಸಿದ್ದಾರೆ.

Related