ಸತೀಶ್ ರೆಡ್ಡಿಗೆ ಕುರುಬ ಸಮುದಾಯ ಬೆಂಬಲ

ಸತೀಶ್ ರೆಡ್ಡಿಗೆ ಕುರುಬ ಸಮುದಾಯ ಬೆಂಬಲ

ಬೊಮ್ಮನಹಳ್ಳಿ: ಕುಲ, ಕುಲ ಎಂದು ಹೊಡೆದಾಡದಿರಿ ಹುಚ್ಚಪ್ಪಗಳಿರಾ ನಿಮ್ಮ ಕುಲದ ನೆಲೆಯನ್ನು ಬಲ್ಲಿರಾ? ಆತ್ಮ, ಜೀವ, ಗಾಳಿ, ನೀರು, ಅನ್ನ ಯಾವ ಕುಲ ಎಂದು ಜಗಕ್ಕೆ ಉಪದೇಶ ಮಾಡಿದ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಹೊಂಗಸಂದ್ರದ APR ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಕುರುಬ ಸಮುದಾಯದ ಸಭೆಯಲ್ಲಿ ಶಾಸಕ ಸತೀಶ್ ರೆಡ್ಡಿ ಅವರು ಪಾಲ್ಗೊಂಡು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನಂತರ ಸಮುದಾಯದವರು ನೀಡಿದ ಗೌರವ ಸನ್ಮಾನವನ್ನು ಸ್ವೀಕರಿಸಲಾಯಿತು.

ಈ ಸಂದರ್ಬದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಶ್ರೀಮತಿ ಭಾರತಿ ರಾಮಚಂದ್ರ ರವರು, ಮಾಜಿ ನಗರಸಭಾ ಸದಸ್ಯರಾದ ಟಿ.ರಾಮಚಂದ್ರ ರವರು, ಸಮುದಾಯದ ಮುಖಂಡರು ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.

Related