ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವು..!

  • In Crime
  • July 30, 2022
  • 339 Views
ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವು..!

ತುಮಕೂರು, ಜು 30 :  ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಸಾವನ್ನಪ್ಪಿದ್ದಾಗಿ ಆರೋಪಿಸಿ ಮೃತಳ ಕುಟುಂಬಸ್ಥರು ಜಿಲ್ಲಾ ಆಸ್ಪತ್ರೆ ಎದುರು ಜಮಾಯಿಸಿ ಗಲಾಟೆ ಮಾಡಿದ್ದಲ್ಲದೆ, ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹೆರಿಗೆ ನಂತರ ಅತಿಯಾದ ರಕ್ತಸ್ರಾವ ಆಗುತ್ತಿದ್ದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಸಿಬ್ಬಂದಿ ಬಿಜಿಎಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ವೇಳೆ ಬಾಣಂತಿ ಸಾವನ್ನಪ್ಪಿದ್ದಾಳೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪಲ್ಲವಿ ಕುಟುಂಬಸ್ಥರು, ರಸ್ತೆ ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಜಿಲ್ಲೆಯ ಕುಣಿಗಲ್ ತಾಲೂಕಿನ ತೆರೆದಕುಪ್ಪೆ ಗ್ರಾಮದ ಪಲ್ಲವಿ ಜು.6ರಂದು ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಸಿಜೇರಿಯನ್ ಡೆಲಿವರಿ ಮಾಡಲಾಗಿದ್ದು, ಗಂಡು ಮಗು ಜನಿಸಿತ್ತು. ಅದಾಗ್ಯೂ ಹೆರಿಗೆ ಸಮಯದಲ್ಲಿ ಅತಿಯಾದ ರಕ್ತಸ್ರಾವ ಆಗುತ್ತಿದ್ದ ಹಿನ್ನೆಲೆ ಪಲ್ಲವಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸೇವಾ ಆಸ್ಪತ್ರೆಗೆ ಪೋಷಕರಿಗೆ ತಿಳಿಸದೆ ರವಾನಿಸಲಾಗಿತ್ತು. ಆಸ್ಪತ್ರೆ ತಲುಪಿದಾಗ ಬಾಣಂತಿ ಪಲ್ಲವಿ ಕೊನೆಯುಸಿರೆಳೆದಿದ್ದಾರೆ.

Related