ಅರಣ್ಯಾಧಿಕಾರಿಗಳಿಗೆ ಹುಲಿ ಉಗುರು ಹಸ್ತಾಂತರಿಸಿದ ಲಕ್ಷ್ಮಿ ಹೆಬ್ಬಾಳಕರ್ ಮಗ!

ಅರಣ್ಯಾಧಿಕಾರಿಗಳಿಗೆ ಹುಲಿ ಉಗುರು ಹಸ್ತಾಂತರಿಸಿದ ಲಕ್ಷ್ಮಿ ಹೆಬ್ಬಾಳಕರ್ ಮಗ!

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ವನ್ಯಜೀವಿಗಳ ಉಗುರು ಮತ್ತು ಚರ್ಮದ ವಿಷಯ ಬರಿ ಗ್ರಾಸವಾಗಿ ಚರ್ಚೆಯಾಗುತ್ತಿದ್ದು ಇದರ ಬೆನ್ನೆಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ ಅರಣ್ಯ ಅಧಿಕಾರಿಗಳಿಗೆ ತಮ್ಮಲ್ಲಿದ್ದಂತಹ ಹುಲಿ ಉಗುರಿನ ಪೆಂಡೆಂಟ್ ಅನ್ನು ಹಸ್ತಾಂತರ ಮಾಡಿದ್ದಾರೆ.

ಹೌದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್, ಹುಬ್ಬಳ್ಳಿ ಕಾಂಗ್ರೆಸ್ ಯುವ ನಾಯಕ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂಬಂಧಿ ರಜತ್ ಉಳ್ಳಾಗಡ್ಡಿಮಠ ಮದುವೆ ವೇಳೆ ವ್ಯಾಘ್ರನಖ ಮಾದರಿ ಪೆಂಡೆಂಟ್ ಧರಿಸಿದ್ದ ಫೋಟೋಗಳು ವೈರಲ್ ಆಗಿದ್ದವು.

ಆದರೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಅವರು, ಹುಲಿ ಉಗುರು ಹೋಲುವ ಪೆಂಡೆಂಟ್ ಧರಿಸಿರುವ ಫೋಟೋಗಳು ಮಾಧ್ಯಮಗಳಲ್ಲಿ ಪ್ರಕಟವಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮೃಣಾಲ್‌ ಹೆಬ್ಬಾಳಕರ್ ಅವರ ಮನೆಗೆ ಆಗಮಿಸಿದ್ದರು.

ಈ ವೇಳೆ ಆ ಪೆಂಡೆಂಟ್ ನ್ನು ಮೃಣಾಲ್ ಅವರು ಅಧಿಕಾರಿಗಳಿಗೆ ಹಸ್ತಾಂತರಿಸಿದ್ದು, ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

Related