ದಾವಣಗೆರೆ, ಫೆ. 24 : ಶಾಸಕರೊಬ್ಬರ ಮೊಮ್ಮಗ ಚಲಾಯಿಸುತ್ತಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಂತರ ಮನೆಗೆ ಡಿಕ್ಕಿ ಭಾರೀ ಅನಾಹುತ ತಪ್ಪಿರುವ ಘಟನೆ ದಾವಣಗೆರೆ ಹೊರವಲಯದ ಶಾಮನೂರು ಸಮೀಪ ನಿನ್ನೆ ತಡರಾತ್ರಿ ನಡೆದಿದೆ.
ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ.ರವೀಂದ್ರನಾಥ್ ಅವರ ಮೊಮ್ಮಗ ಅರುಣ್ಕುಮಾರ್ ನಿನ್ನೆ ಕಾರು ಚಲಾಯಿಸುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಂತರ ಮನೆಯ ಕಾಂಪೌಂಡ್ವೊಂದಕ್ಕೆ ಗುದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.