ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತಿರುಗೇಟು.

ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತಿರುಗೇಟು.

ಸಿದ್ದರಾಮೋತ್ಸವದ ಬಗ್ಗೆ  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಮೈಸೂರಿನಲ್ಲಿ ಶಾಸಕ ಡಾ. ಯತಿಂದ್ರ ತಿರುಗೇಟು ನೀಡಿದ್ದು,  ಬಿಜೆಪಿಯವರು ಮೊದಲು ನಿಮ್ಮ ತೂತುಗಳನ್ನ ಮುಚ್ಚಿಕೊಳ್ಳಿ ಎಂದು ಕಿಡಿಕಾರಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್, ಡಾ. ಜಿ ಪರಮೇಶ್ವರ್ ನಮ್ಮ ನಾಯಕರು. ನಮ್ಮ ಹಿರಿಯ ನಾತಕರ ನಡುವೆ ಭಿನ್ನಾಭಿಪ್ರಾಯ ಇಲ್ಲ ಐಕ್ಯಮತ್ಯ ಮತ್ತು ಸಮನ್ವಯತೆ ಇದೆ. ಅವರದೇ ಆದ ನಾಯಕತ್ವ ಹೊಂದಿದ್ದಾರೆ. ಯಾರನ್ನು ಯಾರು ಮುಗಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದ ನಾಯಕರ ಒಗ್ಗಟ್ಟು ಸಹಿಸದೆ ಬಿಜೆಪಿ ನಾಯಕರು ರಾಜ್ಯದ ಜನರನ್ನ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಬೊಮ್ಮಾಯಿ ವಿರುದ್ಧ ಕೆಲ ಬಿಜೆಪಿ ನಾಯಕರು ತಿರುಗಿ ಬಿದ್ದಿದ್ದಾರೆ. ಮೊದಲು ಈ ಸಮಸ್ಯೆಗಳನ್ನ ಬಿಜೆಪಿ ನಾಯಕರುಗಳು ಸರಿಪಡಿಸಿಕೊಳ್ಳಲಿ ಎಂದು ಹೇಳಿದ್ದಾರೆ.

Related