ಕಮಲ, ತೆನೆ ಬಿಟ್ಟು ‘ಕೈ’ ಹಿಡಿದ ನಾಯಕರುಗಳು

ಕಮಲ, ತೆನೆ ಬಿಟ್ಟು ‘ಕೈ’ ಹಿಡಿದ ನಾಯಕರುಗಳು

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ ರಾಜಕೀಯದಲ್ಲಿ ಪಕ್ಷದಿಂದ ಪಕ್ಷಕ್ಕೆ ಹಾರುವುದು ಹೆಚ್ಚಾಗಿ ಕಂಡುಬರುತ್ತದೆ. ನಿನ್ನೆ ತಾನೆ ಗಾಲಿ ಜನಾರ್ದನ್ ರೆಡ್ಡಿ ಅವರು ತಮ್ಮ ಸ್ವಪಕ್ಷವನ್ನು ತೆರೆದು ಬಿಜೆಪಿ ಪಕ್ಷ ಸೇರಿದ್ದಾರೆ.

ಹೌದು, ಇಂದು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಬೆಂಬಲಿಗರ ಜತೆ ಸಂಸದ ಡಿ ಕೆ ಸುರೇಶ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆಯಿತು. ಮಾಗಡಿ ಕ್ಷೇತ್ರದ ಶಾಸಕರು ಹಾಗೂ ಕೆಆರ್ಡಿಸಿಎಲ್ ಅಧ್ಯಕ್ಷರಾದ ಎಚ್.ಸಿ. ಬಾಲಕೃಷ್ಣ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್ ಎಂ ರೇವಣ್ಣ ಮತ್ತಿತರರು ಹಾಗೂ ಪಕ್ಷದ ಹಿರಿಯ ಮುಖಂಡರು ಉಪಸ್ಥಿತರಿದ್ದರು.

Related