ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿಗೆ ಕಾಡು ಪ್ರಾಣಿಗಳು ನಾಡುಗೆ ನಗುತ್ತಿರುವುದರಿಂದ ಜನರ ನೆಮ್ಮದಿ ಹಾಳಾಗುತ್ತಿದೆ. ಹೌದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷಯವಾಗಿದ್ದು ನಿವಾಸಿಗಳು ಪ್ರಾಣಭಯದಲ್ಲಿ ಬದುಕುತ್ತಿದ್ದಾರೆ

ಬೆಂಗಳೂರಿನ ಹೊಸೂರು ರಸ್ತೆಯ ಕೂಡ್ಲು ಗೇಟ್ ಬಳಿ ಚಿರತೆ ಪ್ರತ್ಯಕ್ಷವಾಗಿದೆ. ನಿವಾಸಿಗಳಾದ ದಾಮೊದರ್ ರೆಡ್ಡಿ ಎಂಬುವವರ ಮನೆಯ ಬಳಿ ಚಿರತೆ ಕಾಣಿಸಿಕೊಂಡಿದ್ದು, ಈ ವೇಳೆ ಚಿರತೆಯನ್ನು ಬೀದಿ ನಾಯಿಗಳು ಓಡಿಸಿಕೊಂಡು ಹೋಗಿದೆ. ಚಿರತೆ ಒಡಾಡುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಚಿರತೆ ನೋಡಿದ ನಿವಾಸಿಗಳು ಬೆಚ್ಚಿ‌ಬಿದ್ದಿದ್ದಾರೆ. ಇದೀಗ ನಿದ್ದೆಗೆಡಿಸಿದ ಚಿರತೆ ಸೆರೆಗಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

Related