ಕೆಂಪೇಗೌಡರ ಮಾರ್ಗದಲ್ಲಿ ನಡೆಯೋಣ

ಕೆಂಪೇಗೌಡರ ಮಾರ್ಗದಲ್ಲಿ ನಡೆಯೋಣ

ಕೆ.ಆರ್.ಪುರ : ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ, ಕೊಡುಗೆ ಹೇಳುವುದಕ್ಕೆ ಮಾತುಗಳೆ ಸಾಲದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದರು.

ಬೆಂಗಳೂರು ನಿರ್ಮಾಪಕ ಕೆಂಪೇಗೌಡರ 511 ನೇ ಜಯಂತ್ಸೋವ ಅಂಗವಾಗಿ ಕೆ.ಆರ್.ಪುರದ ಕಟ್ಟೆ ವಿನಾಯಕ ದೇವಸ್ಥಾನದ ಬಳಿಯಿರುವ ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಮಾತನಾಡಿದರು.

ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ108 ಅಡಿ ಎತ್ತರದ 66 ಕೋಟಿ ರೂ.ಗಳ ವೆಚ್ಚದಲ್ಲಿ ಪುತ್ಥಳಿ ನಿರ್ಮಾಣ ಕಾರ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗುತ್ತಿರುವುದು ಸಂತಸ ತಂದಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಕ್ಷೇತ್ರದ ವಿಜಿನಾಪುರದಲ್ಲಿ ಸುಮಾರು ಹದಿನೈದು ಅಡಿ ಎತ್ತರದ ಕೆಂಪೇಗೌಡ ಪುತ್ಥಳಿ ನಿರ್ಮಿಸಲಾಗುವುದು ಎಂದು ಹೇಳಿದರು.

ಕೆಂಪೇಗೌಡರು ದೂರ ದೃಷ್ಟಿಯಿಂದ ನಗರದ ನಾಲ್ಕು ದಿಕ್ಕುಗಳಲ್ಲಿ ಸ್ತಂಭಗಳನ್ನು ನಿರ್ಮಿಸಿ ನವ ಬೆಂಗಳೂರು ನಿರ್ಮಾಣ ಮಾಡಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ನಡೆಯೋಣ ಎಂದು ತಿಳಿಸಿದರು.

Related