ಹೊರಬಂದರೆ ಲಾಕ್ ಆಗ್ತೀರಾ ಎಚ್ಚರಿಕೆ

ಹೊರಬಂದರೆ ಲಾಕ್ ಆಗ್ತೀರಾ ಎಚ್ಚರಿಕೆ

ಬೆಂಗಳೂರು : ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಭಾನುವಾರ ನಗರವನ್ನು ಸಂಪೂರ್ಣ ಲಾಕ್‌ಡೌನ್ ಮಾಡಲಾಗಿದೆ. ಇದನ್ನು ಪ್ರತಿಯೊಬ್ಬರೂ ತಪ್ಪದೆ ಪಾಲಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಭಾನುವಾರ ಮನೆಯಿಂದ ಯಾರೂ ಹೊರಗೆ ಬರಬಾರದು. ಒಂದು ವೇಳೆ ಅನಗತ್ಯವಾಗಿ ಓಡಾಡಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ ಎಚ್ಚರಿಸಿದ್ದಾರೆ.

ಲಾಕ್‌ಡೌನ್ – 1ರ ಸಂದರ್ಭದಲ್ಲಿ  ನಗರ ಹೇಗಿತ್ತೋ ಅದೇ ಮಾದರಿಯಲ್ಲಿ ಲಾಕ್‌ಡೌನ್ -4 ಇರುತ್ತದೆ. ಇಡೀ ನಗರದಲ್ಲಿ ಬಿಬಿಎಂಪಿ ಮತ್ತು ಪೊಲೀಸ್ ಅಕಾರಿಗಳು ಜಂಟಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಅನಗತ್ಯವಾಗಿ ಓಡಾಟ ನಡೆಸಿ ನಿಯಮ ಮೀರಿದರೆ ತಕ್ಷಣ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗುವುದು. ಸಾರ್ವಜನಿಕರು ಮನೆಯಲ್ಲೇ ಇದ್ದು ಮಹಾಮಾರಿ ಕೊರೊನಾ ಓಡಿಸುವ ಕಾರ್ಯದಲ್ಲಿ ಕೈ ಜೋಡಿಸಬೇಕು ಎಂದು  ಅನಿಲ್ ಕುಮಾರ ಮನವಿ ಮಾಡಿಕೊಂಡಿದ್ದಾರೆ.

Related