ಸುಖ ನಿದ್ರೆಯಲ್ಲಿ ಜಾರಿದ ಅಧಿಕಾರಿಗಳಿಗೆ ಲೋಕಾಯುಕ್ತ ಶಾಖ್

ಸುಖ ನಿದ್ರೆಯಲ್ಲಿ ಜಾರಿದ ಅಧಿಕಾರಿಗಳಿಗೆ ಲೋಕಾಯುಕ್ತ ಶಾಖ್

ಯಾದಗಿರಿ: ಇಂದು ರಾಜ್ಯದಲ್ಲಿ ಹಲವಡೆ ಲೋಕಾಯುಕ್ತ ದಾಳಿ ಮಾಡಿದ್ದು ಸರ್ಕಾರಿ ಅಧಿಕಾರಿಗಳು ಸುಖ ನಿದ್ರೆಯಲ್ಲಿ ಜಾರಿರುವ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಡನ್ ಶಾಕ್ ನೀಡಿದ್ದಾರೆ.

ಹೌದು ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಹಲವೆಡೆ ದಾಳಿ ಮಾಡಿದ್ದು ಲಕ್ಷ, ಲಕ್ಷ ಗಳಿಕೆ ಮಾಡಿರುವ ಅಧಿಕಾರಿಗಳು ಮತ್ತು ರಾಜಕೀಯ ವ್ಯಕ್ತಿಗಳ ಮೇಲೆ ದಾಳಿ ಮಾಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ

ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಬಾಮೈದ ಅಂದರೆ ಪತ್ನಿಯ ಸಹೋದರ ಡಾ ಪ್ರಭುಲಿಂಗ ಮಾನ್ಕರ್ ಲೋಕಾಯುಕ್ತ ರೇಡಾರ್ ನಲ್ಲಿ ಬಂದಿದ್ದು, ಅವರ ಮನೆ ಮತ್ತು ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಾ ಪ್ರಭುಲಿಂಗ್ ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಅಧಿಕಾರಿಯಾಗಿ ಸೇವಾನಿರತರಾಗಿದ್ದಾರೆ.

ಕಲಬುರಗಿ ನಗರದ ಕರುಣೇಶ್ವರ ನಗರದಲ್ಲಿರುವ ಮನೆ, ಹೊರವಲಯದ ಫಾರ್ಮ್ ಹೌಸ್ ಮತ್ತು ಯಾದಗಿರಿ ಆರೋಗ್ಯ ಮತ್ತು ಕಲ್ಯಾಣ ಕಚೇರಿಯ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಡಾ ಪ್ರಭುಲಿಂಗ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿರುವರೆಂದು ಮಾಹಿತಿ ಲಭ್ಯವಾಗಿದೆ.

Related