ಹೊಸಕೋಟೆ : ಜಿಲ್ಲೆಯ ಹೊಸಕೋಟೆ ತಾಲೂಕು ಬೈಲನರಸಾಪುರ ಗ್ರಾ.ಪಂ ಸಭೆಗೆ ಕರೆಯಲಿಲ್ಲ ಎಂದು ಮಾಜಿ ಗ್ರಾ.ಪಂ ಸದಸ್ಯ ಮತ್ತು ಆತನ ಬೆಂಬಲಿಗರು ಲಾಂಗ್ನಿಂದ ವಾಟರ್ ಮ್ಯಾನ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಈ ವೇಳೆ ಪಿಡಿಓ ಅವರು ಗಲಾಟೆ ಮಾಡುವವರನ್ನು ಹೊರಗೆ ಕಳುಹಿಸಿದ್ದಾರೆ. ಬಳಿಕ ನೀರಿನ ಬಾಟಲ್ ತರಲೆಂದು ವಾಟರ್ ಮ್ಯಾನ್ ಪಂಚಾಯತಿ ಕಚೇರಿಯಿಂದ ಹೊರಗೆ ಹೋದಾಗ ಕೆಲವರು ಲಾಂಗ್ ಹಿಡಿದುಕೊಂಡು ಬಂದಿದ್ದಾರೆ.
ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳನ್ನು ಸಭೆಗೆ ಕರೆಯಲಿಲ್ಲ ಎಂದು ವಾಟರ್ ಮ್ಯಾನ್ ಪಾಜೀಲ್ ಅಹ್ಮದ್ ಅವರ ತಲೆಗೆ ಲಾಂಗ್ನಿಂದ ಹಲ್ಲೆ ಮಾಡಲು ಮುಂದಾಗಿದ್ದಾರೆ.
ಹಲ್ಲೆ ಮಾಡಿದ್ದನ್ನು ಪಾಜೀಲ್ ಅಣ್ಣ ಆಗಮಿಸಿ ಪ್ರಶ್ನಿಸಿದಾಗ ಆತನ ಮೇಲೂ ಹಲ್ಲೆ ಮಾಡಲಾಗಿದೆ. ನಂತರ ಇಬ್ಬರೂ ಪಂಚಾಯತಿ ಕಚೇರಿಗೆ ಹೋಗಿ ಪೊಲೀಸರಿಗೆ ಕರೆ ಮಾಡಿದ್ದಾರೆ.
ಹಲ್ಲೆ ನಡೆದ ಬಗ್ಗೆ ಪಾಜೀಲ್ ನಂದಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆ ಸಂಬಂಧ ದೂರು, ಪ್ರತಿ ದೂರು ದಾಖಲಾಗಿದ್ದು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಲಾಂಗ್ ಹಿಡಿದು ಹೋದ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದೆ. ನಂದಗುಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.