ಲಾಂಗ್ ಹಿಡಿದ ಕುಟುಂಬ

ಲಾಂಗ್ ಹಿಡಿದ ಕುಟುಂಬ

ಯಾದಗಿರಿ, ಫೆ.07: ಪ್ರೀತಿಸಿ ಮದುವೆಯಾಗಿದ್ದಕ್ಕೆ ಯುವಕನ ಕುಟುಂಬದ ಮೇಲೆ ಯುವತಿಯ ಕುಟುಂಬಸ್ಥರು ಹಲ್ಲೆ ನಡೆಸಲು ಯತ್ನಿಸಿದ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಜಿಲ್ಲೆಯ ಹುಣಸಗಿ ತಾಲೂಕಿನ ಗುಳಬಾಳ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗುಳಬಾಳ್ ಗ್ರಾಮದ ತುಳಸಿನಾಥ್, ಸುಮಿತ್ರ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಹೀಗಾಗಿ ಕಳೆದ 2 ತಿಂಗಳ ಹಿಂದೆ ಇಬ್ಬರೂ ಮನೆಬಿಟ್ಟು ಓಡಿ ಹೋಗಿ ಮದುವೆ ಆಗಿದ್ದರು. ಇವರಿಬ್ಬರ ಪ್ರೀತಿಗೆ ಕುಟುಂಬಸ್ಥರ ಒಪ್ಪಿಗೆ ಇರಲಿಲ್ಲ. ಇದೇ ಸಿಟ್ಟಿಗೆ ಯುವತಿ ಕಡೆಯ ನಾಗೇಶ್ ಮತ್ತು ರಾಮು ಕೈಯಲ್ಲಿ ತಲವಾರ್ ಹಿಡಿದು ಯುವಕನ ಕುಟುಂಬಸ್ಥರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಮುಂದೆ ಯುವತಿಯ ಮನೆಯವರು ತೆರಳಿ, ಕೈಯಲ್ಲಿ ತಲ್ವಾರ್ ಹಿಡಿದು ಜೀವ ಬೇದರಿಕೆ ಹಾಕಿದ್ದಾರೆ. ಹುಣಸಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related