ಉಮೇಶ್ ಕತ್ತಿಯರಿಗೆ ಎಂ ಸತೀಶ್ ರೆಡ್ಡಿ ಅಂತಿಮ ನಮನ

ಉಮೇಶ್ ಕತ್ತಿಯರಿಗೆ ಎಂ ಸತೀಶ್ ರೆಡ್ಡಿ ಅಂತಿಮ ನಮನ

ಬೆಂಗಳೂರು: ಅರಣ್ಯ ಸಚಿವ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ದಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ವಿಧಾನಸಭೆ ಆಡಳಿತ ಪಕ್ಷದ ಮುಖ್ಯ ಸಚೇತಕರ ಹಾಗೂ ಶಾಸಕರಾದ ಎಂ ಸತೀಶ್ ರೆಡ್ಡಿ ಅವರು ಇಂದು ಬೆಂಗಳೂರಿನ HAL ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ, ಹೃದಯಾಘಾತದಿಂದ ನಿಧನರಾದ ರಾಜ್ಯ ಅರಣ್ಯ ಮತ್ತು ಆಹಾರ ಖಾತೆ ಸಚಿವರಾದ ಶ್ರೀ ಉಮೇಶ್ ಕತ್ತಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು, ಗೌರವವನ್ನು ಸಲ್ಲಿಸಿದರು.

 

Related