ರಾಜ್ಯದಲ್ಲಿ ಮದರಸಾ ಮಂಡಳಿ ಸ್ತಾಪನೆ

ರಾಜ್ಯದಲ್ಲಿ ಮದರಸಾ ಮಂಡಳಿ ಸ್ತಾಪನೆ

ಬೆಂಗಳೂರು,ಸೆ.11: ರಾಜ್ಯದಲ್ಲಿ ಮದರಸಾ ಮಂಡಳಿ ಸ್ಥಾಪಿಸಲು ರಾಜ್ಯ ಸರ್ಕಾರ ಚಿಂತನೆ. ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ , ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ನ ಸೇವೆಯನ್ನು ಶ್ಲಾಘಿಸಿದ ಸಚಿವರು, ಕಳೆದ 50 ವರ್ಷಗಳಲ್ಲಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಿದ್ದಾರೆ ಎಂದರು. ಮದರಸಾಗಳಲ್ಲಿ ಕನ್ನಡವನ್ನು ಕಲಿಸುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ಈಗಾಗಲೇ ತೆಗೆದುಕೊಂಡಿದೆ ಎಂದು ಹೇಳಿದರು. ಅಲ್ಪಸಂಖ್ಯಾತರು ಶಿಕ್ಷಣದಲ್ಲಿ ಹೇಗೆ ಹಿಂದುಳಿದಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ ಅವರು ಸಮುದಾಯದಲ್ಲಿ ಶಿಕ್ಷಣವನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಿಲ್ಲಿಸಲಾಗಿದ್ದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಸರ್ಕಾರ ಪುನರಾರಂಭಿಸಿದೆ ಎಂದು ಹೇಳಿದರು.

Related