ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ನೆಲಮಂಗಲ : ಶಾಲಾ ಕಾಲೆಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಬಸ್ ಸೌಲಭ್ಯ ಇಲ್ಲದಿರೋದ್ರಿಂದ ವಿದ್ಯಾರ್ಥಿಗಳಿಗೆ ತುಂಬಾನೇ ತೊಂದರೆ ಆಗ್ತಿದೆ.

ಈ ಸಮಸ್ಯೆ ಬಗ್ಗೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಸಾರಿಗೆ ಇಲಾಖೆ ಅಗತ್ಯಕ್ಕೆ ತಕ್ಕಂತೆ ಬಸ್ ವ್ಯವಸ್ಥೆ ಮಾಡಿದ್ದು ಇಲಾಖೆ ಜತೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಖಾಸಗಿ ಶಾಲೆಗಳ ಶುಲ್ಕ ನಿಗದಿ ವಿಚಾರದ ಬಗ್ಗೆಯೂ ಮಾತನಾಡಿದ ಸಚಿವರು, ಆಯುಕ್ತರು ಸಭೆ ಮಾಡಿದ್ದು, ಈ ಬಗ್ಗೆ ವಿವರ ಸಲ್ಲಿಸಲಿದ್ದಾರೆ. ಖಾಸಗಿ ಶಾಲಾ ಶಿಕ್ಷಕರಿಗೆ ವೇತನ ಸಿಗುವಂತೆ ಪೋಷಕರಿಗೆ ಹೊರೆ ಆಗದಂತೆ ವಿವರ ಕೊಡುತ್ತಾರೆ ಎಂದರು.

Related