ಮಂಡ್ಯ: ಸೋಲಿನ ಸೇಡು ತೀರಿಸಿಕೊಳ್ಳಲು ಕಾಯುತ್ತಿರುವ ದಳಪತಿಗಳು

ಮಂಡ್ಯ: ಸೋಲಿನ ಸೇಡು ತೀರಿಸಿಕೊಳ್ಳಲು ಕಾಯುತ್ತಿರುವ ದಳಪತಿಗಳು

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ದಳಪತಿಗಳು ಹೀನಾಯವಾಗಿ ಸೋಲನ್ನು ಅನುಭವಿಸಿದ್ದರಿಂದ ಈ ಬಾರಿ ಆ ಸೋಲಿನ ಸೇಡನ್ನು ತೀರಿಸಿಕೊಳ್ಳಲು ದಳಪತಿಗಳು ಭರ್ಜರಿ ಸಿದ್ಧತೆಯನ್ನು ನಡೆಸಿಕೊಳ್ಳುತ್ತಿದ್ದಾರೆ.

ಹೌದು, ಮಂಡ್ಯದಲ್ಲಿ ಕಳೆದ ಬಾರಿ ಚುನಾವಣೆಯಲ್ಲಿ ನಟ ನಿಖಿಲ್ ಕುಮಾರಸ್ವಾಮಿ ಅವರು ಸುಮಲತಾ  ವಿರುದ್ದ ಹೀನಾಯ ಸೋಲನ್ನ ಕಂಡಿದ್ದರು. ಈ ಸೋಲಿನ ಸೇಡು ತೀರಿಸಿಕೊಳ್ಳಲು ಕಾಯುತ್ತಿರುವ ದಳಪತಿಗಳು, ಈ ಬಾರಿ ಮತ್ತೊಮ್ಮೆ ಚುನಾವಣೆಗೆ ನಿಖಿಲ್ ರನ್ನೆ ಕಣಕ್ಕೆ ಇಳಿಸಲು ಪ್ಯ್ಲಾನ್ ಮಾಡುತ್ತಿದ್ದಾರೆ. ಈ ಮೂಲಕ ಕಾಂಗ್ರೆಸ್ ಟಕ್ಕರ್ ಕೊಡಲು ಮುಂದಾಗಿದ್ದಾರೆ.

ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಹೆಸರು ಮತ್ತೆ ಮುನ್ನೆಲೆಗೆ ಬಂದಿದೆ. ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ನಿಖಿಲ್ ಹೆಸರು ಕೇಳಿ ಬರುತ್ತಿದೆ. ಮತ್ತೊಮ್ಮೆ ನಿಖಿಲ್‌ರನ್ನೇ ಕಣಕ್ಕೆ ಇಳಿಸುವಂತೆ ಮಂಡ್ಯ ಜೆಡಿಎಸ್ ನಾಯಕರು ಒತ್ತಡ ಹಾಕುತ್ತಿದ್ದಾರೆ. ಈ ಮೂಲಕ ಲೋಕಸಭೆ, ವಿಧಾನಸಭೆ ಚುನಾವಣೆ ಸೋಲಿನ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

 

Related