ಬೆಂಗಳೂರು : ಬೆಳ್ಳಂಬೆಳಿಗ್ಗೆ ಯಲಹಂಕದ ಬಳಿ ಅಂಬಾರಿ ಡ್ರೀಮ್ಕ್ಲಾಸ್ ಬಸ್ ಮೇಲೆ ಕಲ್ಲು ತೂರಾಟ ನಡೆಸಿದೆ.
ಕೆಎಸ್ಆರ್ಟಿಸಿ ಅಂಬಾರಿ ಡ್ರೀಮ್ಕ್ಲಾಸ್ ಬಸ್ಗೆ ಕಲ್ಲು ತೂರಾಟ ನಡೆದಿದ್ದು, ಬಸ್ನ ಹಿಂಬದಿ ಗಾಜು ಹೊಡೆದು ಹಾನಿಯುಂಟಾಗಿದೆ. ಕಳೆದ 9 ದಿನಗಳಿಂದ ಸಾರಿಗೆ ಸಂಸ್ಥೆಗಳ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ.
ನಿನ್ನೆ ವರೆಗೆ ರಾಜ್ಯದಲ್ಲಿ 60 ಸಾರಿಗೆ ಸಂಸ್ಥೆ ಬಸ್ಗಳ ಮೇಲೆ ದಾಳಿ ಮಾಡಿ ಹಾನಿಗೊಳಿಸಲಾಗಿತ್ತು. ಕೆಎಸ್ರ್ಟಿಸಿಯ 34, ಬಿಎಂಟಿಸಿಯ 3, ಈಶಾನ್ಯ ಸಾರಿಗೆ ಸಂಸ್ಥೆಯ 20, ವಾಯುವ್ಯ ಸಾರಿಗೆ ಸಂಸ್ಥೆಯ ಮೂರು ಬಸ್ಗಳಿಗೆ ಹಾನಿ ಉಂಟು ಮಾಡಲಾಗಿದೆ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.