ವಿಧಾನಪರಿಷತ್ ಚುನಾವಣೆ: ಅಭ್ಯರ್ಥಿಗಳು ಫೈನಲ್

ವಿಧಾನಪರಿಷತ್ ಚುನಾವಣೆ: ಅಭ್ಯರ್ಥಿಗಳು ಫೈನಲ್

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿರುವ ವಿಧಾನ ಪರಿಷತ್ ಚುನಾವಣೆಗೆ ಭಾರೀ ಪೈಪೋಟಿ ನಡೆದಿದ್ದು, ಬಿಜೆಪಿ, ಕಾಂಗ್ರೆಸ್, ಜೆಡಿಸ್ ಪಕ್ಷಗಳು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ಬಿಜೆಪಿಯು ಹೈಕಮಾಂಡ್ ಅಣತಿಯಂತೆ ಮಾಜಿ ಸಚಿವರಾದ ಎಂಟಿಬಿ ನಾಗರಾಜ್, ಆರ್ ಶಂಕರ್, ಮಾಜಿ ಶಾಸಕ ಸುನಿಲ್ ವಲ್ಯಾಪುರೆ, ಬಿಜೆಪಿ ಮುಖಂಡ ಪ್ರತಾಪ್ ಸಿಂಹ ನಾಯಕ್ ಅವರುಗಳ ಹೆಸರುಗಳನ್ನು ಸೂಚಿಸಲಾಗಿದೆ. ಈ ವೇಳೆ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಲ್ಲೇಶ್ವರದಲ್ಲಿ ಬಿಜೆಪಿ ರಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಬಿ-ಫಾರ್ಮ್ ವಿತರಿಸಿದರು.

ಕಾಂಗ್ರೆಸ್ ಅಭ್ಯರ್ಥಿಗಳು

ಬಿ.ಕೆ ಹರಿಪ್ರಸಾದ್ ಹಾಗೂ ನಜೀರ್ ಅಹ್ಮದ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಅಯ್ಕೆಯಾಗಿದ್ದು, ಗುರುವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಯು.ಟಿ ಖಾದರ್, ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ದಿನೇಶಿ ಗುಂಡೂರಾವ್, ಶಾಸಕ ಹ್ಯಾರೀಸ್ ಉಪಸ್ಥಿತರಿದ್ದರು.

ಇನ್ನು ಜೆಡಿಸ್‌ನಿಂದ ಗೋವಿಂದ್ ರಾಜ್ ಅವರನ್ನು ಅಂತಿಮಗೊಳಿಸಲಾಗಿದ್ದು, ನಾಮಪತ್ರ ಸಲ್ಲಿಸಲಾಯಿತು. ಈ ವೇಳೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಇತರರು ಉಪಸ್ಥಿತರಿದ್ದರು.

Related