ಸ್ವ ಗ್ರಾಮದಲ್ಲಿ ಮತ ಚಲಾಯಿಸಿದ ಸಚಿವ ಖೂಬಾ

ಸ್ವ ಗ್ರಾಮದಲ್ಲಿ ಮತ ಚಲಾಯಿಸಿದ ಸಚಿವ ಖೂಬಾ

ಔರಾದ: ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹಾಲಿ ಸಂಸದ ಭಗವಂತ ಖೂಬಾ ಅವರು ಪಟ್ಟಣದ ಬೂತ್ ನಂ. 84ರಲ್ಲಿ ಕುಟುಂಬ ಸಮೇತವಾಗಿ ಮತದಾನ ಮಾಡಿ ಗೆಲುವಿನ ಚಿನ್ನೆ ತೋರಿಸಿದ್ದರು.

ಮತದಾನದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳು, ದೇಶದ ಸುರಕ್ಷತೆ, ಗಡಿ ಭದ್ರತೆ, ವಿದೇಶಾಂಗ ನೀತಿ  ದೇಶದ ಅಭಿವೃದ್ಧಿಗೆ ಮುನ್ನುಡಿ ಹಾಡಿದ. ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಹಾಗೂ ಕ್ಷೇತ್ರದಲ್ಲಿ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು, ಜನರ ಆಶೀರ್ವಾದ ನಮ್ಮ ಗೆಲುವಿಗೆ ಸಾಕ್ಷಿಯಾಗಲಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ರಾಜ್ಯದ ಬಗ್ಗೆ ಸಾಕಷ್ಟು ಒಲವು ಹೊಂದಿದ್ದಾರೆ. ಅವರ ಆಶೀರ್ವಾದದಿಂದ ನಾವು ಗೆಲುವು ಸಾಧಿಸುತ್ತೇವೆ ಎಂದು ಭಗವಂತ ಖೂಬಾ ಹೇಳಿದರು.

ಜನರಲ್ಲಿ ಉತ್ಸಾಹವಿದೆ, ತಮ್ಮ ಹಕ್ಕನ್ನು ಅತಿ ಉತ್ಸಾಹದಿಂದ ಚಲಾಯಿಸುತ್ತಿದ್ದಾರೆ. ಬಿಸಿಲನ್ನು ಲೆಕ್ಕಿಸದೆ ಪ್ರಜಾಪ್ರಭುತ್ವದ ಹಕ್ಕಾಗಿರುವ ಮತದಾನವನ್ನು ಇಂದು ಎಲ್ಲ ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ತಮ್ಮ ಮತ ಚಲಾಯಿಸಿ ಗೌರವ ಮೆರೆದಿದ್ದಾರೆ.

ಇದನ್ನೂ ಓದಿ: ರಾಜ್ಯದ ಘಟಾನುಘಟಿ ನಾಯಕರುಗಳಿಗೆ ಇಂದು ಅಗ್ನಿಪರೀಕ್ಷೆ

ಭಾರತದ ವಿಶ್ವವಿಸ್ತಾರದಲ್ಲಿ ಸ್ಥಾನಮಾನಗಳನ್ನು ಗಳಿಸಿದೆ, ಮತ್ತು ಪ್ರತಿಯೊಬ್ಬರ ಜೀವನದಲ್ಲಿ ಬದಲಾವಣೆ, ಅಮೋಘವಾದ ಮೂಲಭೂತ ಸೌಕರ್ಯಗಳ ಅಭಿಮಾನ, ಹೀಗಾಗಿ ಪ್ರತಿಯೊಬ್ಬರು ಅಭಿವೃದ್ಧಿ ಕಡೆ ಮುಖ ಮಾಡಿ ತಮ್ಮ ಮತದಾನವನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

Related