ಗ್ರಾಮಸ್ಥರಲ್ಲಿ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಗ್ರಾಮಸ್ಥರಲ್ಲಿ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಜಿಲ್ಲೆಯ ನಾವಗೆ ಗ್ರಾಮದಲ್ಲಿ ತ್ರಿಕೋನ ಪ್ರೇಮ ಕಥೆಯಿಂದಾಗಿ ಗ್ರಾಮದಲ್ಲಿ ಇರುವಂತಹ ನಾಲ್ಕು ಮನೆಗಳಿಗೆ ಪುಂಡರು ನುಗ್ಗಿ ಕಲ್ಲು ತೂರಾಟ ಮಾಡಿ ಹಲ್ಲೆ ಮಾಡಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭೇಟಿ ನೀಡಿ, ಘಟನೆಯ ಸಂಪೂರ್ಣ ಮಾಹಿತಿ ಪಡೆದು, ಗ್ರಾಮಸ್ಥರಲ್ಲಿ ಧೈರ್ಯ ತುಂಬಿದರು.

ಸೋಮವಾರ ರಾತ್ರಿ ಘಟನೆ ನಡೆದಿರುವ ಕುರಿತು ಸುದ್ದಿ ತಿಳಿದ ಲಕ್ಷ್ಮೀ ಹೆಬ್ಬಾಳಕರ್, ಗ್ರಾಮದ ಮನೆ ಮನೆಗೆ ತೆರಳಿ ಎಲ್ಲರಿಂದ ಮಾಹಿತಿ ಸಂಗ್ರಹಿಸಿದರಲ್ಲದೆ, ಅವರಲ್ಲಿ ಧೈರ್ಯ ತುಂಬುವ ಕೆಲಸ ಮಾಡಿದರು. ಘಟನೆಗೆ ಕಾರಣ ಹಾಗೂ ನಂತರ ತೆಗೆದುಕೊಂಡಿರುವ ಕ್ರಮಗಳ ಕುರಿತು ಪೊಲೀಸರಿಂದ ಸಹ ಸಚಿವರು ಮಾಹಿತಿ ಪಡೆದರು.

ನಂತರ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, ಶಾಲೆ, ಕಾಲೇಜಿಗೆ ತೆರಳುವ ಅಪ್ರಾಪ್ತ ಮಕ್ಕಳು ಸಿಟ್ಟಿನ ಕೈಯಲ್ಲಿ ಬುದ್ದಿ ಕೊಟ್ಟಿದ್ದರಿಂದ ಈ ಘಟನೆ ನಡೆದಿದೆ. ಎರಡೂ ಗ್ರಾಮಗಳ ಹಿರಿಯರನ್ನು ಕರೆಸಿ ಮಾತುಕತೆ ನಡೆಸಿ ಮುಂದೆ ಇಂತಹ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸುದ್ದಿ ತಿಳಿದ ತಕ್ಷಣ ಎಲ್ಲ ಕಾರ್ಯಕ್ರಮಗಳನ್ನು ಬದಿಗಿಟ್ಟು ಇಲ್ಲಿಗೆ ಬದಿದ್ದೇನೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ನಾನೇ ಮುಂದಾಗಿ ನಿಂತು, ಘಟನೆಯ ಸಂಪೂರ್ಣ ಮಾಹಿತಿ ಪಡೆದು ಕಾನೂನಿನ ಚೌಕಟ್ಟಿನಲ್ಲಿ ಬಗೆಹರಿಸಲಾಗುವುದು. ಎರಡೂ ಊರಿನ ಹಿರಿಯರನ್ನು, ಪೊಲೀಸರನ್ನು ಕೂಡ್ರಿಸಿಕೊಂಡು ಪರಸ್ಪರ ದ್ವೇಷ ಉಳಿಯದಂತೆ ಕ್ರಮ ತೆಗೆದುಕೊಳ್ಳಲಾಗುವುದು. ಅಕ್ಕಪಕ್ಕದ ಊರಿನ ಜನರು ಮೊದಲಿನಂತೆ ಪರಸ್ಪರ ನಗು ನಗುತ್ತ ಇರುವಂತೆ ಮಾಡುತ್ತೇನೆ ಎಂದು ಹೆಬ್ಬಾಳಕರ್ ಭರವಸೆ ನೀಡಿದರು.

ಕ್ಷೇತ್ರದಲ್ಲಿ ಎಲ್ಲೂ ಕಾನೂನಿನ ಸಮಸ್ಯೆ ಆಗಿಲ್ಲ. ಘಟನೆ ನಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಕ್ರಮ ತೆಗೆದುಕೊಂಡಿದ್ದಾರೆ. ಡಿ.31ರ ರಾತ್ರಿ ಹೊಸವರ್ಷಾಚರಣೆ ವೇಳೆ ಬಾದರವಾಡಿ ಮತ್ತು ನಾವಗೆ ಗ್ರಾಮದ ಹುಡುಗರ ಮಧ್ಯೆ ಸ್ವಲ್ಪ ಗಲಾಟೆ ಆಗಿದೆ. ಅದರ ಸಿಟ್ಟಿನಿಂದ ಆ್ಯಕ್ಷನ್ ಗೆ ರಿಯಾಕ್ಷನ್ ಆಗಿದೆ. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು ಎಂದು ವಿನಂತಿಸುತ್ತೇನೆ. ಎಲ್ಲರೂ ಸಣ್ಣ ಮಕ್ಕಳು. ಅವರ ಭವಿಷ್ಯದ ದೃಷ್ಟಿಯಿಂದ ಕಾನೂನಿನ ಚೌಕಟ್ಟಿನಲ್ಲಿ ಸರಿಪಡಿಸಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

Related