ಬಡಕುಟುಂಬಗಳಿಗೆ ನೆರವಾದ ಸಚಿವ..!

  • In State
  • July 18, 2022
  • 234 Views
ಬಡಕುಟುಂಬಗಳಿಗೆ ನೆರವಾದ ಸಚಿವ..!

ಚಿಕ್ಕಮಗಳೂರು, ಜುಲೈ 18 : ಮಲೆನಾಡಲ್ಲಿ ಸುರಿಯುತ್ತಿರುವ ಮಹಾಮಳೆ ನೂರಾರು ಜನರನ್ನು ಬೀದಿಗೆ ಬೀಳಿಸುತ್ತಿದೆ. ನಿರಂತರ ಮಳೆಯಿಂದ ಮಲೆನಾಡಿಗರ ಬದುಕು ಶೋಚನೀಯ ಸ್ಥಿತಿಗೆ ತಂದೊಡ್ಡಿದೆ. ಮಳೆಯ ನಡುವೆ ಟಾರ್ಪಲ್ ಕಟ್ಟಿಕೊಂಡು ಬದುಕು ಸಾಗಿಸುತ್ತಿರೋ ಮೂಡಿಗೆರೆಯ ಬಡ ಕುಟುಂಬದ ಕಥೆ ಕಣ್ಣೀರು ತರಿಸುವಂತಿದೆ.

ಮೂಡಿಗೆರೆ ತಾಲ್ಲೂಕು ಕೊಟ್ಟಿಗೆಹಾರ ಸಮೀಪದ ಆಜಾದ್ ರಸ್ತೆಯಲ್ಲಿರುವ ಲೀಲಾ ಎಂಬುವರ ಮನೆ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಮನೆ ಹಾನಿಯಾಗಿದ್ದು, ನೆಲೆಸಲು ನೆರಳಿಲ್ಲದೇ ಪಕ್ಕದಲ್ಲೇ ಟಾರ್ಪಲ್ನಿಂದ ಟೆಂಟ್ ಕಟ್ಟಿಕೊಂಡು ದಿನ ದೂಡುತ್ತಿದ್ದು, ದಿನನಿತ್ಯ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ.

ಲೀಲಾ ಅವರಿಗೆ ನಾಲ್ಕು ಜನ ಮಕ್ಕಳಿದ್ದು, ಗಂಡ ಮೃತಪಟ್ಟಿದ್ದಾರೆ. ಇದ್ದ ಮನೆಯೂ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಮನೆಯ ಮೇಲ್ಛಾವಣಿ ಸಂಪೂರ್ಣ ಹಾಳಾಗಿದ್ದು, ಗೋಡೆಗಳು ಮಾತ್ರ ಉಳಿದುಕೊಂಡಿದೆ. ಮನೆ ಕಳೆದುಕೊಂಡು ದಿಕ್ಕು ಕಾಣದ ಅವರು ಪಕ್ಕದಲ್ಲೇ ಟಾರ್ಪಲ್ನಿಂದ ಟೆಂಟ್ ಕಟ್ಟಿಕೊಂಡು ಅಲ್ಲೇ ವಾಸ ಮಾಡುತ್ತಿದ್ದಾರೆ.

ಇನ್ನು ಬಡ ಕುಟುಂಬ ಸ್ಥಿತಿ ಕಂಡ ಉಸ್ತುವಾರಿ ಸಚಿವರು ತಕ್ಷಣವೇ ತಮ್ಮ ಜೇಬಿನಲ್ಲಿದ್ದ 50 ಸಾವಿರ ಹಣ ನೀಡಿ, ಇದನ್ನ ಮಕ್ಕಳ ವಿದ್ಯಾಭ್ಯಾಸ ಕ್ಕೆ ಬಳಸಿ ಸರ್ಕಾರದ ಪರಿಹಾರದಲ್ಲಿ ಮನೆ ಕಟ್ಟಿಸಿಕೊಳ್ಳಿ ಎಂದು ದೈರ್ಯ ತುಂಬಿದರು.

Related