ಆರ್.ಎಸ್.ಎಸ್ ಕಚೇರಿಗೆ ಸಚಿವ ಭೇಟಿ

ಆರ್.ಎಸ್.ಎಸ್ ಕಚೇರಿಗೆ ಸಚಿವ ಭೇಟಿ

ರಾಮನಗರ : ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹಣೆ ನಡೆಯುತ್ತಿದೆ. ಚನ್ನಪಟ್ಟಣದಲ್ಲಿ ಸಣ್ಣ ನೀರಾವರಿ ಸಚಿವ ಸಿ. ಪಿ. ಯೋಗೇಶ್ವರ್ ನಿಧಿ ಸಂಗ್ರಹದಲ್ಲ ಪಾಲ್ಗೊಂಡರು, ಆರ್.ಎಸ್ ಎಸ್ ಕಚೇರಿಗೆ ಭೇಟಿ ನೀಡಿದರು.

ಭಾನುವಾರ ಚನ್ನಪಟ್ಟಣದ ಕನಕನಗರ ಬಡಾವಣೆಯಲ್ಲಿ ಸಚಿವ ಸಿ. ಪಿ. ಯೋಗೇಶ್ವರ್ ಮನೆ ಮನೆಗೆ ತೆರಳಿ ನಿಧಿ ಸಂಗ್ರಹ ಮಾಡಿದರು. ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮತ್ತು ಸಂಘ ಪರಿವಾರದ ಸದಸ್ಯರೊಂದಿಗೆ ಬಡಾವಣೆಯ ಬೀದಿಗಳಲ್ಲಿ ಸಂಚಾರ ಮಾಡಿದರು.

ಶ್ರೀರಾಮ ಮಂದಿರ ನಿರ್ಮಾಣಕ್ಕೆ ಮುಕ್ತ ಮನಸ್ಸಿನಿಂದ ದೇಣಿಗೆ ನೀಡುವಂತೆ ಸಚಿವರು ಮನವಿ ಸಲ್ಲಿಸಿದರು. ಹಾಗೂ ಯಾವುದೇ ಒತ್ತಾಯವಿಲ್ಲ ತಮ್ಮ ಶಕ್ತಿ ಅನುಸಾರ ದೇಣಿಗೆ ನೀಡುವಂತೆ ಜನರಿಗೆ ಕರೆ ನೀಡಿದರು.

Related