ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕಿ ಮಂಜುಳಾ ಲಿಂಬಾವಳಿ ವಾಗ್ದಾಳಿ

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕಿ ಮಂಜುಳಾ ಲಿಂಬಾವಳಿ ವಾಗ್ದಾಳಿ

ಬೆಂಗಳೂರು: ಬೆಂಗಳೂರು ವಲಯ ಮಹದೇವಪುರ ಕ್ಷೇತ್ರದ ಕಣ್ಣೂರು ಗ್ರಾಮ ಪಂಚಾಯಿತಿ ವಲಯದಲ್ಲಿ ಬುದುವಾರ 2023-24 ನೇ ಸಾಲಿನ ಮೊದಲನೇ ಗ್ರಾಮ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಹದೇವಪುರ ಶಾಸಕಿ ಮಂಜುಳಾ ಲಿಂಬಾವಳಿಯವರು, ಕಾಂಗ್ರೆಸ್ ಸರ್ಕಾರ ಕೇವಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತಿದೆ ಆದರೆ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಕ್ರಮವನ್ನು ಮಾಡುತ್ತಿಲ್ಲವೆಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿರಿಕರಿದ್ದಾರೆ.

ಇನ್ನು ಈ ಸಭೆಯಲ್ಲಿ ಗ್ರಾಮಸಭೆಯ ಅಧ್ಯಕ್ಷರಾದ ಎಸ್ ಅಶೋಕ್ ಮಾತನಾಡಿ, ನಮ್ಮ ಗ್ರಾಮದಲ್ಲಿ ಹಲವಾರು ಉನ್ನತ ಕೆಲಸಗಳನ್ನು ನಾವು ಮಾಡಿದ್ದೇವೆ ಮತ್ತು ಗ್ರಾಮ ಪಂಚಾಯಿಂದ ಗ್ರಾಮದ ಜನತೆಗೆ ಶೌಚಾಲಯವನ್ನು ನಿರ್ಮಿಸಿ ಮತ್ತು ಗ್ರಾಮದ ಜನತೆಗೆ ಸಹಾಯವಾಗಲೆಂದು ಆಂಬುಲೆನ್ಸ್ ವ್ಯವಸ್ಥೆಯನ್ನು ನೀಡಲಾಗಿದೆ. ಗ್ರಾಮದ ಜನತೆಗೆ ನೀರಿನ ವ್ಯವಸ್ಥೆ ಬೀದಿಬದಿ ವಿದ್ಯುತ್ ದೀಪದ ವ್ಯವಸ್ಥೆ ಮತ್ತು ರಸ್ತೆ ಡಾಂಬರೀಕರಣದ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ಹೇಳಿದರು.

ಗ್ರಾಮದಲ್ಲಿ ಯಾರೆಲ್ಲ ಬಡವರು ಇರುತ್ತಾರೆ ಅಂತವರಿಗೆ ಗ್ರಾಮ ಪಂಚಾಯಿತಿಯಿಂದ ಮನವ್ಯವಸ್ಥೆಯನ್ನು ಮಾಡಿಕೊಡಲಾಗುವುದು ಎಂದು ಅಶೋಕ್ ಅವರು ಈ ಸಂದರ್ಭದಲ್ಲಿ ಹೇಳಿದರು

ಗ್ರಾಮ ಸಭೆಯಲ್ಲಿ ಕೋವಿಡ್ ಸಂಧರ್ಭದಲ್ಲಿ ಸತತವಾಗಿ ಕಾರ್ಯನಿರ್ವಸಿಸಿರುವ ಡಾ. ಉಮಾ ರಾಕೇಶ್ ರವರಿಗೆ ಸನ್ಮಾನ ಮಾಡಲಾಯಿತು.

Related