ಶ್ರೀ ಲಕ್ಷ್ಮೀ ವೆಂಕಟರಮಣ ರಥೋತ್ಸವಕ್ಕೆ ಶಾಸಕ ಸತೀಶ್ ರೆಡ್ಡಿ ಚಾಲನೆ

ಶ್ರೀ ಲಕ್ಷ್ಮೀ ವೆಂಕಟರಮಣ ರಥೋತ್ಸವಕ್ಕೆ ಶಾಸಕ ಸತೀಶ್ ರೆಡ್ಡಿ ಚಾಲನೆ

ಅಗರ: ಅಗರ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟರಮಣ ರಥೋತ್ಸವಕ್ಕೆ ಸರ್ಕಾರದ ಮುಖ್ಯ ಸಚೇತಕರು ಹಾಗೂ ಶಾಸಕ ಸತೀಶ್ ರೆಡ್ಡಿ ಅವರು ಇಂದು ಚಾಲನೆ ನೀಡಿದರು.

ನೂರಾರು ವರ್ಷಗಳ ಇತಿಹಾಸವಿರುವ ಈ ದೇವಸ್ಥಾನಕ್ಕೆ ಸುಮಾರು ಸುತ್ತಮುತ್ತಲಿನ 30 ಗ್ರಾಮಗಳ ಜನರಿಗೆ ತಿರುಪತಿಯ ಶ್ರೀನಿವಾಸನ ದರ್ಶನ ಪಡೆದ ಸಂತೃಪ್ತಿ ಭಾವ ಇದೆ. ಇಂದಿಗೂ ಸಹ ಸುತ್ತಮುತ್ತಲಿನ ಗ್ರಾಮದ ಜನತೆ ಲಕ್ಷ್ಮೀ ವೆಂಕಟರಮಣ ದರ್ಶನ ಪಡೆದು ದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗುತ್ತಾರೆ ಎಂದು ಶಾಸಕ ಸತೀಶ್ ರೆಡ್ಡಿ ನುಡಿದರು.

ರಥೋತ್ಸವದ ದಿನದಂದು ಸಾವಿರಾರು ಭಕ್ತರಿಗಾಗಿ ಅನ್ನ ದಾಸೋಹವನ್ನು ಏರ್ಪಡಿಸಲಾಗುತ್ತದೆ. ಭಕ್ತಾದಿಗಳಿಗೆ ವಿಶೇಷ ಲಾಡು ಪ್ರಸಾದವನ್ನು ವಿತರಿಸಲಾಗುತ್ತದೆ.

ಈ ರಥೋತ್ಸವದಲ್ಲಿ ದೇವಸ್ಥಾನದ ಟ್ರಸ್ಟಿ ಹಾಗೂ ನಿವೃತ್ತ ಉಚ್ಛ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ್ ರೆಡ್ಡಿ, ಮಾಜಿ ಪಾಲಿಕೆ ಸದಸ್ಯ ಗುರುಮೂರ್ತಿ ರೆಡ್ಡಿ, ದೇವಸ್ಥಾನದ ಟ್ರಸ್ಟಿ ಕೃಷ್ಟ ರೆಡ್ಡಿ, ಸೋಮಸಂದ್ರಪಾಳ್ಯದ ಬಿಜೆಪಿ ಮುಖಂಡ ಶ್ರೀನಿವಾಸ್ ರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

Related