ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ

ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ

ಚಿಂಚೋಳಿ : ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ ಚಿಂಚೋಳಿ ತಾಲೂಕಿನ ಹೇಮ್ಲಾನಾಯಕ ತಾಂಡದ ಅರವಿಂದ ಮಾಣಿಕ ಜಾಧವ ಮನೆಗೆ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಅವಿನಾಶ ಜಾದವರವರು ಭೇಟಿ ನೀಡಿ ಸಾಂತ್ವನ ಹೇಳಿದರು.

ಮೃತರ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಸಾಲ ಸೌಲಭ್ಯಗಳನ್ನು ನೀಡುವುದರ ಜೊತೆಗೆ ಹಾಗೂ ಕುಟುಂಬದ ಹೊರೆಗಾಗಿ ಮೃತನ ಪತ್ನಿಗೆ ಯಾವುದಾದರೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ನೀಡುವ ಭರವಸೆ ನೀಡಿದ ಶಾಸಕರು ಅವರ ಕುಟುಂಬಕ್ಕೆ ಭಗವಂತನು, ಅವರ ಆತ್ಮಕ್ಕೆ ಶಾಂತಿ ನೀಡಿ, ದು:ಖ ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮಾಜಿ ತಾ.ಪಂ. ಸದಸ್ಯರಾದ ಪ್ರೇಮಸಿಂಗ್ ಜಾಧವ, ಪಕ್ಷದ ಮುಖಂಡರಾದ ರಮೇಶ ಪಡಶೆಟ್ಟಿ, ಚಾರ್ಟರ್ಡ್ ಅಕೌಂಟೆಂಟ್ ಉಮೇಶ ಚವ್ಹಾಣ, ಪಕ್ಷದ ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.

Related