ಮೋದಿಗೆ ಸಿಎಂ ಬಿಎಸ್ ವೈ ಸಾಥ್

ಮೋದಿಗೆ ಸಿಎಂ ಬಿಎಸ್ ವೈ ಸಾಥ್

ವಾರಣಸಿ, ಫೆ. 17 : ತವರು ಕ್ಷೇತ್ರ ವಾರಾಣಸಿಯಲ್ಲಿ ಪ್ರಧಾನಿ ಮೋದಿ ಇಂದು 30 ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಈ ಪೈಕಿ ವಾರಾಣಸಿ ಮತ್ತು ಇಂದೋರ್ ನಡುವೆ ಚಲಿಸುವ ಕಾಶಿ ಮಹಾಕಲ್ ರೈಲು ಕೂಡ ಒಂದಾಗಿದೆ. ಈ ರೈಲು ಉತ್ತರಪ್ರದೇಶದಲ್ಲಿರುವ ಮೂರು ಜ್ಯೋತಿರ್ಲಿಂಗ ಹೊಂದಿರುವ ವಾರಾಣಸಿ, ಉಜ್ಜೈನಿ ಮತ್ತು ಓಂಕಾರೇಶ್ವರ ಕ್ಷೇತ್ರ ನಡುವೆ ಸಂಪರ್ಕ ಕಲ್ಪಿಸಲಿದೆ. ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ 430 ಹಾಸಿಗೆಯುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ 74 ಬೆಡ್ಗಳ ಮನೋವೈದ್ಯಶಾಸ್ತ್ರ ವಿಭಾಗಕ್ಕೆ ಚಾಲನೆ ಸಿಕ್ಕಿತು.
ಭಾರತೀಯ ಜನಸಂಘ ಮುಖಂಡ ಪಂಡಿತ್ ದೀನ್ ದಯಾಳ್ ಉಪಾದ್ಯಾಯ ಅವರ 63 ಅಡಿ ಎತ್ತರದ ಪಂಚಲೋಧ ಪ್ರತಿಮೆ ಲೋಕಾರ್ಪಣೆಗೊಳಿಸಿದರು. ಚಂಡೌಲಿಯಲ್ಲಿರುವ ಪಂಡಿತ್ ದೀನ್ ದಾಯಾಳ್ ಉಪಾದ್ಯಾಯ ಸ್ಮಾರಕ ಕೇಂದ್ರದಲ್ಲಿ ಈ ಪ್ರತಿಮೆ ನಿರ್ಮಿಸಲಾಗಿದೆ. ಪ್ರಧಾನಿ ಮೋದಿ ವಾರಾಣಸಿಯಲ್ಲಿರುವ ಜಂಗಮವಾಡಿ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಪ್ರಧಾನಮಂತ್ರಿಗಳಿಗೆ ಕರ್ನಾಟಕ ಸಿಎಂ ಯಡಿಯೂರಪ್ಪ ಮತ್ತು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಾಥ್ ನೀಡಿದ್ದರು.

Related