ಮೋದಿ ಮಹತ್ವದ ಸಭೆ

ಮೋದಿ ಮಹತ್ವದ ಸಭೆ

ನವದೆಹಲಿ: ಕರ್ನಾಟಕ ರಾಜ್ಯದಲ್ಲಿ 2023ನೇ ಸಾಲಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಹೀನಾಯವಾಗಿ ಸೋಲನ್ನು ಕಂಡಿರುವುದರಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಿಜೆಪಿ ಪಕ್ಷದ ಮುಖ್ಯಮಂತ್ರಿಗಳ ಜೊತೆ ಇಂದು ಮಹತ್ವದ ಸಭೆಯನ್ನು ನಡೆಸುತ್ತಿದ್ದಾರೆ.

ಹೌದು, ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿಯಲ್ಲಿ ತಮ್ಮ ಮೊದಲ ರಾಜಕೀಯ ಸಭೆ ನಡೆಸಿದ್ದಾರೆ.

ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಅಜೆಂಡಾಗಳ ಸಭೆ ನಡೆಸಿರುವ ಮೋಧಿ ಅವರು, ಹಲವಾರು ಯೋಜನೆಗಳು ಮತ್ತು ಇತರ ವಿಷಯಗಳಲ್ಲಿ ಬಿಜೆಪಿ ಪಕ್ಷದ ಆಡಳಿತದ ರಾಜ್ಯಗಳ ಕಾರ್ಯಕ್ಷಮತೆಯನ್ನು ಚರ್ಚಿಸಿದರು.

ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಚುನಾವಣೆಗೆ ಒಳಪಟ್ಟಿರುವ ಸಂಸದರು ಉತ್ತಮ ಆಡಳಿತ ಮತ್ತು ಅಭಿವೃದ್ಧಿಗಳು, ಬಡವರ ಕಲ್ಯಾಣ ಯೋಜನೆಗಳ ಪ್ರಗತಿಯ ಕುರಿತು ತಮ್ಮ ವರದಿ ಕಾಡ್ರ್ಗಳನ್ನು ಮಂಡಿಸಿದರು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

 

Related