ಮತ್ತೆ ರಾಜ್ಯದಲ್ಲಿ ಅಬ್ಬರಿಸಲಿರುವ ಮೋದಿ

ಮತ್ತೆ ರಾಜ್ಯದಲ್ಲಿ ಅಬ್ಬರಿಸಲಿರುವ ಮೋದಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ಕರ್ನಾಟಕ ರಾಜ್ಯಕ್ಕೆ ಎಂಟ್ರಿಕೊಟ್ಟು ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರವನ್ನು ಕೈಗೊಂಡಿದ್ದರು.

ಇದಾದ ಬಳಿಕ ಇಂದು ಏಪ್ರಿಲ್ 17 ಕಾಂಗ್ರೆಸ್ನ ನಾಯಕ ರಾಹುಲ್ ಗಾಂಧಿ ಕರ್ನಾಟಕ ರಾಜ್ಯಕ್ಕೆ ಎಂಟ್ರಿ ಕೊಡುತ್ತಿರುವ ಬೆನ್ನಲ್ಲೇ ಮತ್ತೆ ನರೇಂದ್ರ ಮೋದಿಯವರು ಇದೇ ಏಪ್ರಿಲ್ 20ರಂದು ರಾಜ್ಯಕ್ಕೆ ಎಂಟ್ರಿ ಕೊಟ್ಟು ಬೆಂಗಳೂರಿನಲ್ಲಿ ಭರ್ಜರಿ ಮತ ಪ್ರಚಾರ ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದ್ದು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಭರ್ಜರಿ ಮತ ಪ್ರಚಾರದಲ್ಲಿ ತೊಡಗಲಿದ್ದಾರೆ ಎಂದು ತಿಳಿದು ಬಂದಿದೆ.

ಹೌದು, ಪ್ರಧಾನಿ ನರೇಂದ್ರ ಮೋದಿ (ಏಪ್ರಿಲ್ 14) ಭಾನುವಾರವಷ್ಟೇ ಮೈಸೂರು, ಮಂಗಳೂರಿನಲ್ಲಿ ಅಬ್ಬರಿಸಿ ಹೋಗಿದ್ದ ಮತ್ತೆ ರಾಜ್ಯದಲ್ಲಿ ಮತಬೇಟೆ ನಡೆಸಲಿದ್ದಾರೆ. ಏಪ್ರಿಲ್ 20ಕ್ಕೆ ಮತ್ತೊಂದು ಸಮಾವೇಶಕ್ಕೆ ಸಿದ್ಧತೆ ನಡೆದಿದೆ.. ಅರಮನೆ ಮೈದಾನದಲ್ಲಿ ಬೆಂಗಳೂರಿನ ಮೂರು ಲೋಕಸಭೆ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಸಮಾವೇಶಕ್ಕೆ ಪ್ಲಾನ್ ಮಾಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಇನ್ನು ಅಂದೇ ಚಿಕ್ಕಬಳ್ಳಾಪುರದಲ್ಲೂ ಸಮಾವೇಶ ಅಥವಾ ರ್ಯಾಲಿ ನಡೆಸುವ ಬಗ್ಗೆ ಚರ್ಚೆ ನಡೆದಿದೆ. ಮೋದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸಾಥ್ ನೀಡಲಿದ್ದಾರೆ ಎನ್ನಲಾಗಿದೆ.

 

Related