ಮೋದಿ ಪ್ರಧಾನ ಮಂತ್ರಿ ಅಲ್ಲ, ಪರಿಧಾನ್ ಮಂತ್ರಿ: ಸುರ್ಜೇವಾಲಾ

ಮೋದಿ ಪ್ರಧಾನ ಮಂತ್ರಿ ಅಲ್ಲ, ಪರಿಧಾನ್ ಮಂತ್ರಿ: ಸುರ್ಜೇವಾಲಾ

ಹುಬ್ಬಳ್ಳಿ: ಕರ್ನಾಟಕ ರಾಜಕೀಯ ರಂಗದಲ್ಲಿ ದಿನಕ್ಕೊಂದು ತಿರುವ ಪಡೆಯುತ್ತಿದ್ದು, ಅಡಳಿತ ಪಕ್ಷದ ಮೇಲೆ ವಿರೋಧ ಪಕ್ಷದ ನಾಯಕರುಗಳು ಒಂದಲ್ಲ ಒಂದು ಆರೋಪ ಮಾಡುತ್ತಲೇ ಇದ್ದಾರೆ.

ಇನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸರ್ಜಿಬಲ್ ಅವರು ಬಿಜೆಪಿಯವರ ಮೇಲೆ ಗಂಭೀರ ಆರೋಪವನ್ನು ಮಾಡಿದ್ದಾರೆ. ಇಡೀ ದೇಶದಲ್ಲಿ ಹೊಸ ಈಸ್ಟ್ ಇಂಡಿಯಾ ಕಂಪನಿ ಎಂದರೆ ಅದು ಬಿಜೆಪಿ ಎಂದು, ಬಿಜೆಪಿ ಪಕ್ಷದ ವಿರುದ್ಧ ಆರೋಪ ಮಾಡಿದ್ದಾರೆ.

ನಗರದಲ್ಲಿಂದು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹೇಳುವುದು ಒಂದು, ಮಾಡುವುದು ಮತ್ತೊಂದು. ಇನ್ನು ಮೋದಿ ಪ್ರಧಾನ ಮಂತ್ರಿ ಅಲ್ಲ ಪರಿಧಾನ್ ಮಂತ್ರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಆರೋಪ ಮಾಡಿದರು.

ಮೋದಿ ಅವರೇ ಖುದ್ದು ಖಾಲಿ ಚೊಂಬು. ಮೋದಿ ಪ್ರಧಾನ ಮಂತ್ರಿ ಅಲ್ಲ ಪರಿಧಾನ್ ಮಂತ್ರಿ. ಪ್ರತಿ ವರ್ಷ ಮೋದಿ ಅವರಿಂದ ಖಾಲಿ ಚೊಂಬು ಗ್ಯಾರಂಟಿ ಕೊಡಲಾಗುತ್ತಿದೆ. ಉದ್ಯೋಗ ಸೃಷ್ಟಿ, ಕಪ್ಪು ಹಣ ವಾಪಸ್ ಸೇರಿ ಎಲ್ಲ ಗ್ಯಾರಂಟಿಗಳಲ್ಲಿ ಚೊಂಬು ಕೊಟ್ಟಿದ್ದಾರೆ. ಕಳೆದ 10 ವರ್ಷದಲ್ಲಿ ಮೋದಿ ಏನು ಮಾಡಿಲ್ಲ. ಜನರಿಗೆ ಚೀಟಿಂಗ್ ಮಾಡೊ ಕೆಲಸ ಮಾಡಿದ್ದಾರೆ. ಇದು ನಾಚಿಕೆಗೇಡಿನ ವರ್ತನೆ. ಈ ಬಗ್ಗೆ ನಾವು ಬಹಿರಂಗ ಚರ್ಚೆಗೆ ಸಿದ್ದರಾಗಿದ್ದೇವೆ. ಬೇಕಾದರೆ ಪತ್ರಕರ್ತರೆ ಜಡ್ಜ್ ಆಗಲಿ. ಸ್ಥಳವನ್ನು ಅವರೇ ನಿಗದಿ ಮಾಡಲಿ. ಸಿಎಂ, ಡಿಸಿಎಂ ಸೇರಿ ನಮ್ಮ ಸಚಿವರು, ಮುಖಂಡರು ಚರ್ಚೆಗೆ ಸಿದ್ಧರಾಗಿದ್ದಾರೆ ಎಂದು ಹೇಳಿದರು.

 

Related