ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು: ಬಿ.ವೈ.ವಿಜಯೇಂದ್ರ

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು: ಬಿ.ವೈ.ವಿಜಯೇಂದ್ರ

ಬೆಳಗಾವಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚಿನ ಸಂಸದರನ್ನು ಆಯ್ಕೆ ಮಾಡಿ ಕಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಿ ಭಾರತದ ಅಭಿವೃದ್ಧಿಗೆ ಅವರನ್ನು ಬೆಂಬಲಿಸಲು, ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರ ನಡೆಸಲು, ನಾವು ಇಂದಿನಿಂದಲೇ ಪಕ್ಷವನ್ನು ಸಂಘಟಿಸುವುದರೊಂದಿಗೆ, ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಆಡಳಿತದಲ್ಲಿ, ಜನಪ್ರಿಯ ಯೋಜನೆಗಳು ಮತ್ತು ಅಭಿವೃದ್ಧಿಗಳನ್ನು ಮನೆ ಮನೆಗೆ ತಿಳಿಸುವ ಕಾರ್ಯ ನಮ್ಮದಾಗಬೇಕೆಂದು ಬಿಜೆಪಿ ರಾಜ್ಯಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಬೆಳಗಾವಿ ಮಹಾನಗರ ಹಾಗೂ ಗ್ರಾಮಾಂತರ ಜಿಲ್ಲೆ ಒಳಗೊಂಡಂತೆ, ಬಿಜೆಪಿ ಕಾರ್ಯಾಲಯಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಜಿ.ವಿ. ರಾಜೇಶ್, ಮತ್ತು ಬಿಜೆಪಿ ಪಕ್ಷದ ಬೆಳಗಾವಿ ನಗರ ಅಧ್ಯಕ್ಷರು, ಗ್ರಾಮಾಂತರ ಅಧ್ಯಕ್ಷರು ಸೇರಿದಂತೆ,ಶಾಸಕರುಗಳು ಪ್ರಮುಖರು ಉಪಸ್ಥಿತರಿದ್ದರು.

Related