ದೇಶದಲ್ಲೆಡೆ ಮೋದಿ ಅಲೆ ಬೀಸುತ್ತಿದೆ: ಸಿ.ಟಿ. ರವಿ

ದೇಶದಲ್ಲೆಡೆ ಮೋದಿ ಅಲೆ ಬೀಸುತ್ತಿದೆ: ಸಿ.ಟಿ. ರವಿ

ವಿಜಯಪುರ: ರಾಜ್ಯದಲ್ಲಿ ಲೋಕಸಭಾ ಕಣ ದಿನದಿಂದ ದಿನಕ್ಕೆ ರಂಗೆರುತ್ತಿದ್ದು  ಎಲ್ಲ ಪಕ್ಷದ ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಇನ್ನು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳ ಪರವಾಗಿ ಪಕ್ಷದ ಘಟಾನುಘಟಿಗಳು ಪ್ರಚಾರದಲ್ಲಿ ತೊಡಗಿದ್ದು  ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ರಮೇಶ ಜಿಗಜಿಣಗಿ ಅವರ ಪರವಾಗಿ ಭರ್ಜರಿ ಮತ ಪ್ರಚಾರದಲ್ಲಿ ತೊಡಗಿದ್ದಾರೆ.

ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ನಾಮಪತ್ರ ಸಲ್ಲಿಕೆಗಾಗಿ ವಿಜಯಪುರಕ್ಕೆ ಆಗಮಿಸಿದ್ದ ಅವರು ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಸಿ.ಟಿ. ರವಿ ಅವರು, ದೇಶದಲ್ಲೆಡೆ ಮೋದಿ ಅಲೆ ಬೀಸುತ್ತಿರುವ ಸಂದರ್ಭದಲ್ಲಿ ವಿಜಯಪುರಕ್ಕೆ ಜಿಗಜಿಣಗಿ, ದೇಶಕ್ಕೆ ಮೋದಿ ಎಂಬ ಘೋಷವಾಕ್ಯದೊಂದಿಗೆ ಜನರ ಬಳಿ‌ ಮತಯಾಚನೆ ಮಾಡುತ್ತಿದ್ದೇವೆ ಎಂದರು.

ಪ್ರಧಾನಿ‌ ಮೋದಿಯವರು ಎರಡು ದಿನಗಳ‌ ಹಿಂದೆ ಕೇಂದ್ರಿಯ ಕಾರ್ಯಾಲಯದಲ್ಲಿ ಭವಿಷ್ಯದ ಭಾರತ ಗಮನದಲ್ಲಿಟ್ಟುಕೊಂಡು ವಿಕಸಿತ ಭಾರತದ ಸಂಕಲ್ಪ‌ ಪತ್ರ ಬಿಜೆಪಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದರು. ನಮ್ಮ‌ ಪ್ರಣಾಳಿಕೆಯಲ್ಲಿ ವಿಶೇಷವಾಗಿ ಮೋದಿ‌ ಗ್ಯಾರಂಟಿ ಇದೆ. ಪ್ರಾಣ ಹೋದ್ರೂ ಕೊಟ್ಟ ಮಾತು ಮೀರಬಾರದೆಂಬುದು, ಸುರಕ್ಷಿತ ಭಾರತ, ಸುಶಿಕ್ಷಿತ ಭಾರತ, ಸಮೃದ್ಧ ಭಾರತ, ಆತ್ಮನಿರ್ಭರ ಭಾರತ, ಮೋದಿ ಗ್ಯಾರಂಟಿಗಳಾಗಿವೆ, ಭಾರತ ವಿಶ್ವಗುರು ಆಗಬೇಕು‌ ಎಂಬುದು ನಮ್ಮ‌ ಗುರಿ. ಈ ರಿಪೋರ್ಟ್ ಕಾರ್ಡ್ ನಲ್ಲಿ ಹತ್ತು ವರ್ಷಗಳಲ್ಲಿ ನಾವು ಮಾಡಿರುವ ರಿಫಾರ್ಮ್, ಪರ್ಫಾರ್ಮ್ ಮತ್ತು ಟ್ರಾನ್ಸ್ಫಾರ್ಮ್ ಈ‌ ತ್ರಿಸೂತ್ರದಲ್ಲಿ ನಾವು ಜನರ ಮುಂದೆ ಹೋಗಿ ಅವರ ಆಶಿರ್ವಾದ ಪಡೆಯುತ್ತೇವೆ ಎಂದರು.

 

Related