ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಅತಿಥಿಯಾಗಿರುವ ನಟ ದರ್ಶನ್ ಮತ್ತು ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಮತ್ತಷ್ಟು ಸಂಕಷ್ಟ ಎದುರಾಗಿದೆ.
ಹೌದು, ದರ್ಶನ್ ಅಂಡ್ ಗ್ಯಾಂಗ್ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಜುಲೈ 18ರ ವರೆಗೂ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಇಂದು (ಗುರುವಾರ ಜುಲೈ 04) ರಂದು ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸುವಂತೆ ಎಸ್ಪಿಪಿ ರಿಮ್ಯಾಂಡ್ ಅರ್ಜಿ ಸಲ್ಲಿಕೆ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಯಿತು. ಆರ್ಥಿಕ ಅಪರಾಧಗಳ ಕೋರ್ಟ್ಗೆ ರಿಮ್ಯಾಂಡ್ ಅರ್ಜಿ ಸಲ್ಲಿಕೆ ಆಗಿದೆ. ಜುಲೈ 18ರವರೆಗೆ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ. ಇದನ್ನೂ ಓದಿ: ನಟ ದರ್ಶನ್ ಗೆ ಇಂದು ಮಹತ್ವದ ದಿನ; ಯಾಕೆ ಗೊತ್ತಾ..?
ಕೊಲೆ ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್ ಹಾಗೂ ಅವರ ಸಹಚರರಿಗೆ ಜೈಲೇ ಗತಿಯಾಗಿದೆ. ಪರಪ್ಪನ ಅಗ್ರಹಾರ ಹಾಗೂ ತುಮಕೂರು ಜೈಲಿನಲ್ಲಿ ಇರುವ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ನಲ್ಲಿ ಹಾಜರು ಪಡಿಸಲಾಯಿತು. ಜಡ್ಜ್ ಎಲ್ಲರ ಹೆಸರು ಕರೆಯುತ್ತಿದ್ದಂತೆಯೇ ಕೈಎತ್ತಿ ಹಾಜರಿ ಖಾತರಿಪಡಿಸಿದರು. ದರ್ಶನ್ ಅವರು ಜೈಲಿನಿಂದ ಹೊರಬರಲಿ ಎಂಬುದು ಅಭಿಮಾನಿಗಳು ಮತ್ತು ಆಪ್ತರ ಬಯಕೆ ಆಗಿದೆ. ಆದರೆ ಇದು ಗಂಭೀರ ಪ್ರಕರಣ ಆದ್ದರಿಂದ ಜಾಮೀನು ಸಿಗುವುದು ಸದ್ಯಕ್ಕೆ ಕಷ್ಟವಾಗಿದೆ.