ಮಿಸ್ಟರ್ ನಡ್ಡಾಜಿ, ನಮ್ಮನ್ನು ಹೆದರಿಸಬೇಡಿ, ಏನು ಹೆದರಿಸ್ತೀರಾ? ಡಿಕೆಶಿ ತಿರುಗೇಟು

ಮಿಸ್ಟರ್ ನಡ್ಡಾಜಿ, ನಮ್ಮನ್ನು ಹೆದರಿಸಬೇಡಿ, ಏನು ಹೆದರಿಸ್ತೀರಾ? ಡಿಕೆಶಿ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಎಲ್ಲಾ ಪಕ್ಷದ ಅಭ್ಯರ್ಥಿಗಳು ತಮ್ಮ ಗೆಲುವಿಗಾಗಿ ಭರ್ಜರಿ ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ. ಇದರ ಮಧ್ಯೆ ಡಿಕೆ ಶಿವಕುಮಾರ್ ಅವರು ರಾಷ್ಟ್ರ ಅಧ್ಯಕ್ಷ ಜೆಪಿ ನಡ್ದವರಿಗೆ, ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರಿಗೆ ಹೆದರಿಸಿದರೆ ನಾವು ಯಾವುದೇ ಕಾರಣಕ್ಕೂ ಹೆದರುವುದಿಲ್ಲವೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನಡ್ದವರಿಗೆ ತಿರುಗೇಟು ನೀಡಿದ್ದಾರೆ.

ಹೌದು, ಕಾಂಗ್ರೆಸ್ ನಾಯಕರು ನಿಮ್ಮ ಬೆದರಿಕೆಗೆ ಹೆದರೋದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ತಿರುಗೇಟು ನೀಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಾರದೆ ಇದ್ದರೆ ಕೇಂದ್ರದ ಯೋಜನೆಗಳನ್ನು ನಿಲ್ಲಿಸುತ್ತೇವೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದರು.

ಸದಾಶಿವನಗರದಲ್ಲಿ ಸೋಮವಾರ ಮಾತನಾಡಿದ ಡಿಕೆಶಿ,‌ ಮಿಸ್ಟರ್ ನಡ್ಡಾಜಿ, ನಮ್ಮನ್ನು ಹೆದರಿಸಬೇಡಿ, ಏನು ಹೆದರಿಸ್ತೀರಾ? ಎಂದು ಖಾರವಾಗಿ ಪ್ರಶ್ನಿಸಿದರು.

ಕೇಂದ್ರದ ಯೋಜನೆಗಳನ್ನು ನಿಲ್ಲಿಸ್ತೇವೆ ಅಂತ ಹೆದರಿಸ್ತೀರಾ? ನಿಮ್ಮ ಶಾಸಕರು ಮಕ್ಕಳ ತರಹ ಸುಮ್ಮನಿರಬಹುದು. ಆದರೆ ಕಾಂಗ್ರೆಸ್ ನಾಯಕರು ನಿಮ್ಮ ಬೆದರಿಕೆಗೆ ಹೆದರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಇದೇ ಸಂದರ್ಭದಲ್ಲಿ ನಿಮ್ಮ ಪ್ರಧಾನಿಯನ್ನು ಬೀದಿ ಬೀದಿ ಅಲೆಯೋ ತರಹ ಮಾಡಿದ್ದೀರಲ್ಲ ಎಂದು ನರೇಂದ್ರ ಮೋದಿ ರೋಡ್ ಶೋಗೂ ತಿರುಗೇಟು ನೀಡಿದರು.

 

 

Related