ಮುದ್ದೇಬಿಹಾಳ : ಮರು ನಿರ್ಮಾಣಗೊಂಡ ತಾಲೂಕಿನ ಮಲಗಲದಿನ್ನಿ ಕೆರೆಗೆ ಗುರುವಾರ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಗ್ರಾಮಸ್ಥರೊಂದಿಗೆ ಬಾಗಿನ ಅರ್ಪಿಸಿದರು.
ಹಲವಾರು ವರ್ಷಗಳಿಂದ ಬರಿದಾಗಿದ್ದ ಕೆರೆಗೆ ಕಾಲುವೆಯ ಮೂಲಕ ನೀರು ತುಂಬಿಸಲಾಗಿದ್ದು ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಅನುಕೂಲವಾಗಲಿದೆ.ಈ ವೇಳೆ ಮಾತನಾಡಿದ ಶಾಸಕರು,ಮತಕ್ಷೇತ್ರದ ಎಲ್ಲ ಕೆರೆಗಳನ್ನು ಭರ್ತಿ ಮಾಡಲು ಪಣ ತೊಟ್ಟಿದ್ದು ಬೇಸಿಗೆಯ ಸಮಯದಲ್ಲಿ ತೊಂದರೆಯಾಗದಂತೆ ಕ್ರಮ ಜರುಗಿಸಲಾಗಿದೆ ಎಂದು ಹೇಳಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಿರಾದಾರ, ತಾಪಂ ಮಾಜಿ ಸದಸ್ಯ ಮುತ್ತಣ್ಣ ಹುಂಡೇಕಾರ ಸೇರಿದಂತೆ ಗ್ರಾಮಸ್ಥರು ಇದ್ದರು.