ತಾಪಂ ನೂತನ ಅಧ್ಯಕ್ಷೆ ಲಕ್ಷ್ಮೀಬಾಯಿ ಪವಾಡೆಪ್ಪ

ತಾಪಂ ನೂತನ ಅಧ್ಯಕ್ಷೆ ಲಕ್ಷ್ಮೀಬಾಯಿ ಪವಾಡೆಪ್ಪ

ಮುದ್ದೇಬಿಹಾಳ: ತಂತ್ರ, ಕುತಂತ್ರ ರಾಜಕಾರಣದಲ್ಲಿ ಸರ್ವೇ ಸಾಮಾನ್ಯ. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಜಟಾಪಟಿಯಲ್ಲಿ ಸತ್ಯಕ್ಕೆ ಸಾವಿಲ್ಲವೆಂಬುದು ಸಾಬೀತಾಗಿದೆ ಎಂದು ನೂತನವಾಗಿ ಆಯ್ಕೆಯಾದ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಲಕ್ಷ್ಮೀಬಾಯಿ ಪವಾಡೆಪ್ಪ ನುಡಿದರು.

ತಮ್ಮ ಗೆಲುವಿಗಾಗಿ ಶ್ರಮಿಸಿದ ಶಾಸಕ ಎ.ಎಸ್. ಪಾಟೀಲ, ಮಾಜಿ ಸಚಿವ ನಾಡಗೌಡ, ಕಾರ್ಯಕರ್ತರು, ಬೆಂಬಲಿಗರಿಗೆ ಅಭಿನಂದನೆ ಸಲ್ಲಿಸಿದರು.

ಈ ವೇಳೆ ಶಾಸಕ ಎ ಎಸ್ ಪಾಟೀಲ(ನಡಹಳ್ಳಿ) ಹಾಗೂ ಮಾಜಿ ಸಚಿವ ಸಿ ಎಸ್ ನಾಡಗೌಡ ಅವರ ಸ್ವ ಪ್ರತಿಷ್ಠೆಗೆ ಕಾರಣವಾಗಿದ್ದ ತಾಪಂ ನೂತನ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ತನ್ನ ಕೈ ಕಳೆದುಕೊಂಡು ಕಮಲ ಅರಳುವಂತೆ ಮಾಡಿದ ಶಾಸಕ ಎ ಎಸ್ ಪಾಟೀಲ(ನಡಹಳ್ಳಿ)ರವರಿಗೆ ಬಿಜೆಪಿ ಕಾರ್ಯಕರ್ತರು ಅಭಿಮಾನಿಗಳು ಜೈಕಾರ ಹಾಕಿ ಘೋಷಣೆ ಕೂಗಿದರು. ಬಳಿಕ ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

ಈ ವೇಳೆ ತಾಪಂ ನೂತನ ಅಧ್ಯಕ್ಷೆಯಾಗಿ ಆಯ್ಕೆಗೊಂಡ ಲಕ್ಷ್ಮೀಬಾಯಿ ಪವಾಡೆಪ್ಪ ಹವಾಲ್ದಾರ, ಶಾಂತಗೌಡ ಪಾಟೀಲ(ನಡಹಳ್ಳಿ), ಬಸವರಾಜ ಗುಳಬಾಳ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಿರಾದಾರ, ಪುರಸಭೆ ಸದಸ್ಯ ಸಂಗಮ್ಮ ದೇವರಳ್ಳಿ, ಮಂಜುನಾಥ ರತ್ನಾಕರ, ಬಿಜೆಪಿ ತಾಲೂಕಾ ಅಧ್ಯಕ್ಷ ಪರುಶುರಾಮ ಪವಾರ, ಅಶೋಕ ರಾಠೋಡ, ಚಂದ್ರಕಲಾ ಲೋಟಗೇರಿ, ತಾಪಂ ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ ಸೇರಿದಂತೆ ಹಲವು ಇದ್ದರು.

Related