ಆದಿ ಚುಂಚನಗಿರಿ ಶಾಖಾ ಮಠದಲ್ಲಿ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ

ಆದಿ ಚುಂಚನಗಿರಿ ಶಾಖಾ ಮಠದಲ್ಲಿ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ

ತುರುವೇಕೆರೆ: ತುರುವೇಕೆರೆ ತಾಲ್ಲೂಕಿನ ಮಾಯಸಂದ್ರದ ಶ್ರೀ ಆದಿ ಚುಂಚನಗಿರಿ ಮಹಾ ಸಂಸ್ಥಾನದ ಶಾಖಾಮಠದಲ್ಲಿಂದು ಹಲವು ಅಭಿವೃದ್ಧಿ ಕಾಮಗಾರಿ ಗಳನ್ನು ಅಬಕಾರಿ ಸಚಿವ ಕೆ.ಗೋಪಾಲಯ್ಯ ಲೋಕಾರ್ಪಣೆಗೊಳಿಸಿದರು.

ದೋಣಿ ವಿಹಾರ ಉದ್ಘಾಟನೆ, ಪುತ್ಥಳಿ ಅನಾವರಣ, ಚುಂಚಾದ್ರಿ ರೈತ ಸಂತೆ ಮತ್ತು ಆದಿ ಚುಂಚನಗಿರಿ ಸಮುದಾಯ ಭವನ ಉದ್ಘಾಟನಾ ಸಮಾರಂಭದಲ್ಲಿ ಸಚಿವರು ಪಾಲ್ಗೊಂಡರು.

ಈ ಸಂದರ್ಭದಲ್ಲಿ ಆದಿ ಚುಂಚನಗಿರಿ ಶ್ರೀಮಠದ ಶ್ರೀ ಶ್ರೀ ಶ್ರೀ ಡಾ.‌ನಿರ್ಮಲಾನಂದ ನಾಥ ಮಹಾಸ್ವಾಮೀಜಿ, ಮಾಜಿ ಸಚಿವ ಎಚ್.ಕೆ.ಪಾಟೀಲ್, ತೋಟಗಾರಿಕಾ ಸಚಿವ ಮುನಿರತ್ನ, ಮಸಾಲೆ ಜಯರಾಂ ಸೇರಿದಂತೆ ಅನೇಕ ಮುಖಂಡರು, ಸ್ಥಳೀಯರು ಉಪಸ್ಥಿತರಿದ್ದರು.

 

Related