ಗಾಂಧೀ ಭಾರತ ಕಾರ್ಯಕ್ರಮದ  ಪೂರ್ವ ಭಾವಿ ಸಭೆಯಲ್ಲಿ ಮುನಿಯಪ್ಪ ಭಾಗಿ

ಗಾಂಧೀ ಭಾರತ ಕಾರ್ಯಕ್ರಮದ  ಪೂರ್ವ ಭಾವಿ ಸಭೆಯಲ್ಲಿ ಮುನಿಯಪ್ಪ ಭಾಗಿ

ಬೆಂಗಳೂರು: ಇದೇ ಜನವರಿ 21ರಂದು ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮಕ್ಕೆ ಅದ್ದೂರಿಯಾಗಿ ಚಾಲನೆ ನೀಡಲಿದ್ದು ಈ ಕಾರ್ಯಕ್ರಮಕೆಂದು ಪ್ರತಿ ಜಿಲ್ಲೆಯಿಂದ ನೂರು ಜನ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್ ಮುನಿಯಪ್ಪ ಹೇಳಿದರು.

ನಗರದಲ್ಲಿಂದು ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮ ಅತಿ ಅದ್ದೂರಿಯಾಗಿ ನಡೆಯಲಿದ್ದು ಈ ಕಾರ್ಯಕ್ರಮ ಸಂಪೂರ್ಣವಾಗಿ ಯಶಸ್ವಿಯಾಗಲಿದೆ ಎಂದು ಹೇಳಿದರು.

ಜಿಲ್ಲೆಯ ಪ್ರತಿಯೊಂದು ತಾಲ್ಲೂಕಿನ ನಿಂದ 100 ಜನ ಮುಖಂಡರು ಮತ್ತು ಕಾರ್ಯಕರ್ತರು ಬರಲಿದ್ದು ಬರುವ ಎಲ್ಲಾ ಕಾರ್ಯಕರ್ತರಿಗೆ ಉಪಹಾರ ಹಾಗೂ ಊಟದ ವ್ಯವಸ್ಥೆಯನ್ನು ನೀಡಲು ಅಧ್ಯಕ್ಷರು ನಮ್ಮ ಸಮಿತಿಯನ್ನು ರಚಿಸಿದ್ದು ನಾನು ನಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಾದ ಸಂತೋಷ್ ಲಾಡ್, ವೆಂಕಟೇಶ್ ರವರೊಂದಿಗೆ ಚರ್ಚಿಸಿ ಬರುವ ಎಲ್ಲಾ ಗಾಂಧೀ ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ಉತ್ತಮವಾದ ವ್ಯವಸ್ಥೆಗಳನ್ನು ಕಲ್ಲಿಸುತ್ತೇವೆ  ಎಂದರು. ಇದನ್ನೂ ಓದಿ: ಸಂವಿಧಾನದ ಬಗ್ಗೆ ಗೌರವ ಇರುವ ಎಲ್ಲರಿಗೂ ಸಮಾವೇಷಕ್ಕೆ ಸ್ವಾಗತ: ಸಿಎಂ

ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿಕೆ.ಶಿವಕುಮಾರ್, ಸಚಿವರು,ಶಾಸಕರು ,ಮಾಜಿ ಸಚಿವರು, ಮಾಜಿ ಶಾಸಕರು, ಡಿಸಿಸಿ ಅಧ್ಯಕ್ಷರು ,ಕೆಪಿಸಿಸಿ ಪಧಾದಿಕಾರಿಗಳು ಉಪಸ್ಥಿತರಿದ್ದರು.

Related