ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಸಾವು ..!

  • In Crime
  • June 2, 2022
  • 233 Views
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಸಾವು ..!

ಬೆಳಗಾವಿ, ಜೂ 02 : ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಗೋಕಾಕ್ ತಾಲೂಕಿನ ಕೊಣ್ಣೂರ ಪಟ್ಟಣದಲ್ಲಿ ನಡೆದಿದೆ.

ಹುಕ್ಕೇರಿ ಮೂಲದ ದುಂಡಯ್ಯ ನಂದಿಕೊಳ್ಳಮಠ (42) ಕೊಲೆಯಾದ ವ್ಯಕ್ತಿ. ದುಂಡಯ್ಯ ಹುಕ್ಕೇರಿಯಿಂದ ಕೊಣ್ಣೂರಿನಲ್ಲಿರುವ ಹೆಂಡತಿ ಮನೆಗೆ ಬಂದಿದ್ದರು. ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತಲೆಯ ಭಾಗಕ್ಕೆ ಹೊಡೆದು ದುಂಡಯ್ಯನನ್ನು ಕೊಲೆ ಮಾಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಕೊಲೆಗೆ ಕಾರಣ ತಿಳಿದಿಲ್ಲ. ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related