ಹುಬ್ಬಳ್ಳಿ: ಐಸಿಸ್ ಉಗ್ರರ ಜತೆ ಯಾರೆಲ್ಲಾ ನಂಟು ಇದ್ದರೆಂಬುದನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಹೇಳಲಿ ಎಂದು ಬಾಷಾಪೀರ್ ದರ್ಗಾದ ಧರ್ಮಗುರು ಸೈಯದ್ ತಾಜುದ್ದೀನ್ ಖಾದ್ರಿ ಯತ್ನಾಳ್ಗೆ ಸವಾಲ್ ಹಾಕ್ಕಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಸೈಯದ್ ತಾಜುದ್ದೀನ್ ಖಾದ್ರಿ, ಅಂದು ಸಮಾವೇಶಕ್ಕೆ 150ಕ್ಕೂ ಹೆಚ್ಚು ಸೂಫಿಗಳಿಗೆ ಆಹ್ವಾನ ನೀಡಲಾಗಿತ್ತು. 100ಕ್ಕೂ ಹೆಚ್ಚು ಧರ್ಮ ಗುರುಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದರಲ್ಲಿ ಯಾರೊಬ್ಬರೂ ಐಸಿಸ್ ಉಗ್ರರ ಜತೆ ನಂಟು ಹೊಂದಿದ್ದವರು ಇಲ್ಲ. ಪೊಲೀಸ್ ಇಲಾಖೆ ಸೂಚನೆ ಮೇರೆಗೆ ವೇದಿಕೆಯ ಮೇಲೆ 25 ಜನರಿಗೆ ಅವಕಾಶ ನೀಡಲಾಗಿತ್ತು. ಯಾರೆಲ್ಲಾ ಭಾಗವಹಿಸಲಿದ್ದಾರೆಂಬ ಎಲ್ಲಾ ಮಾಹಿತಿಯನ್ನು ಪೊಲೀಸ್ ಇಲಾಖೆ, ಧಾರವಾಡ ಜಿಲ್ಲಾಡಳಿತಕ್ಕೆ ನಾವು ನೀಡಿದ್ದೆವು ಎಂದು ಹೇಳಿದರು.