ದೇಶದಲ್ಲಿ ಸಾಮರಸ್ಯ ಬೆಳೆಯಲು ಮಠಗಳು ದಾರಿದೀಪವಾಗಬೇಕು: ಯು.ಟಿ ಖಾದರ್

ದೇಶದಲ್ಲಿ ಸಾಮರಸ್ಯ ಬೆಳೆಯಲು ಮಠಗಳು ದಾರಿದೀಪವಾಗಬೇಕು: ಯು.ಟಿ ಖಾದರ್

ಉಡುಪಿ: ನಾನು ಚಿಕ್ಕಂದಿನಿಂದಲೂ ಎಲ್ಲ ಧರ್ಮಗಳನ್ನು ಪಾಲಿಸುತ್ತಾ ಬಂದಿದ್ದೇನೆ ಅದರಲ್ಲೂ ಉಡುಪಿಯಲ್ಲಿರುವ ಕೃಷ್ಣಮಠಕ್ಕೆ ನಾನು ಹಲವಾರು ಬಾರಿ ಭೇಟಿ ನೀಡಿದ್ದೇನೆ ಎಂದು ವಿಧಾನಸಭಾ ವಿಧಾನಸಭೆ ಸಭಾಪತಿ ಯುಟಿ ಖಾದಿರವರು ಹೇಳಿದ್ದಾರೆ.

ಉಡುಪಿ ಕೃಷ್ಣ ಮಠದ ಪುತ್ತಿಗೆ ಪರ್ಯಾಯ ದರ್ಬಾರ್‌ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೃಷ್ಣ ಮಠ ಸಾಮಾಜಿಕವಾಗಿ, ಧಾರ್ಮಿಕವಾಗಿ ತೊಡಗಿಸಿಕೊಂಡ ಕೇಂದ್ರ. ಪುತ್ತಿಗೆ ಮಠದ ಪರ್ಯಾಯದಲ್ಲಿ ಭಾಗಿಯಾಗಿರೋದು ಪುಣ್ಯದ ಕೆಲಸ ಎಂದು ವಿಧಾನಸಭೆ ಸಭಾಪತಿ ಯು.ಟಿ ಖಾದರ್ ಹೇಳಿದರು.

ಧಾರ್ಮಿಕ ಕೇಂದ್ರಗಳಿಗೆ ಸಮಾಜವನ್ನು ತಿದ್ದುವ ಶಕ್ತಿಯಿದೆ. ಸಮಾಜ ಒಡೆದು ಹೋಗುವ ಸಂದರ್ಭದಲ್ಲಿ ಮಠಾಧೀಶರು ಜೋಡಿಸಬೇಕು. ಪುತ್ತಿಗೆ ಶ್ರೀಗಳು ಧಾರ್ಮಿಕವಾಗಿ ದೇಶ-ವಿದೇಶದಲ್ಲಿ ತೊಡಗಿಸಿಕೊಂಡವರು ಎಂದರು.

ರಾಜ್ಯ, ದೇಶದಲ್ಲಿ ಸಾಮರಸ್ಯ ಬೆಳೆಯಲು ಮಠಗಳು ದಾರಿದೀಪವಾಗಬೇಕು. ಹಿಂದಿನಿಂದಲೂ ನಾನು ಕೃಷ್ಣ ಮಠಕ್ಕೆ ಸಂಬಂಧಪಟ್ಟ ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಮಠ ಕೇವಲ ಧಾರ್ಮಿಕವಾಗಿ ಕಾರ್ಯಾಚರಿಸದೆ, ಶೈಕ್ಷಣಿಕ, ಸಾಮಾಜಿಕವಾಗಿ ಕೂಡಾ ಕೆಲಸ ಮಾಡುತ್ತಿದೆ ಎಂದು ಹೇಳಿದರು.

Related