ಬೆಂಗಳೂರು, ಆಗಸ್ಟ್ 08: ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ದೇಶಾದ್ಯಂತ ಬಿಜೆಪಿಯಿಂದ ಹರ್ ಫರ್ ತಿರಂಗಾ ಅಭಿಯಾನ ನಡೆಯುತ್ತಿದೆ. ಜೆಪಿ ನಗರದಲ್ಲಿರೋ ನಟ ಸುದೀಪ್ ಮನೆಗೆ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು, ನಟ ಸುದೀಪ್ಗೆ ತ್ರಿವರ್ಣ ಧ್ವಜ ನೀಡಿದ್ರು.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಹರ್ ಘರ್ ತಿರಂಗಾ ಕಾರ್ಯಕ್ರಮಕ್ಕೆ ಕರೆ ನೀಡಿದ್ದು, ಇದಕ್ಕಾಗಿ ದೇಶಾದ್ಯಂತ ಸಿದ್ಧತೆ ನಡೆದಿದೆ. ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸೋ ಹೊಣೆ ಹೊತ್ತಿರೋ ಬಿಜೆಪಿ ನಾಯಕರು ಎಲ್ಲೆಡೆ ರಾಷ್ಟ್ರಧ್ವಜಗಳ ಹಂಚಿಕೆಯಲ್ಲಿ ನಿರತರಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ನಟ ಸುದೀಪ್ ಅವರಿಗೆ ತ್ರಿವರ್ಣ ಧ್ವಜ ನೀಡಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರೊಂದಿಗೆ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ರಾಜೇಶ್ ಜಿ ವಿ , ಕ್ಷೇತ್ರದ ಶಾಸಕರಾದ ಸತೀಶ್ ರೆಡ್ಡಿ, ರಾಜ್ಯಸಭಾ ಸಂಸದರಾದ ಜಗ್ಗೇಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಮಂಜುನಾಥ ಸಹ ಉಪಸ್ಥಿತರಿದ್ರು.