ಕಾಂಗ್ರೆಸ್​​ನ ಗುರಿಯೇ ನರೇಂದ್ರ ಮೋದಿ: ಆರ್ ಅಶೋಕ್

ಕಾಂಗ್ರೆಸ್​​ನ ಗುರಿಯೇ ನರೇಂದ್ರ ಮೋದಿ: ಆರ್ ಅಶೋಕ್

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಇಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಮಾಡಿದೆ ಎಂದು ಹೋರಾಟ ಮಾಡುತ್ತಿದ್ದಾರೆ. ಇದಕ್ಕೆ ಪ್ರತಿ ಉತ್ತರವಾಗಿ ಇಂದು ವಿಧಾನಸೌಧದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಬಿಜೆಪಿಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಮಾತನಾಡಿ, ಮಾನ ಮರ್ಯಾದೆ ಇರುವ ಪಕ್ಷ ದೇಶ ವಿಭಜನೆಯ ಮಾತು ಯಾವತ್ತೂ ಆಡಿರಲಿಲ್ಲ. ಕಾಂಗ್ರೆಸ್ ನವರಿಗೆ ನಾಚಿಕೆ ಆಗಲ್ವಾ, ಮಾನ ಮರ್ಯಾದೆ ಇದ್ಯಾ? ನಮ್ಮ ಹಣ ಎಲ್ಲಾ ಉತ್ತರ ಪ್ರದೇಶಕ್ಕೆ ಹೋಗುತ್ತದೆ ಅಂತಾ ಹೇಳುತ್ತೀರಲ್ವಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

136 ಜನ ಕಾಂಗ್ರೆಸ್ ಶಾಸಕರು ಸಂಸದ ಡಿ‌ಕೆ ಸುರೇಶ್ ಹೇಳಿಕೆಯನ್ನು ಬೆಂಬಲಿಸಲು ದೆಹಲಿಗೆ ಹೋಗಿದ್ದಾರೆ ಎಂದು ಅವರು ದೂರಿದ್ದಾರೆ. ಕಾಂಗ್ರೆಸ್​​ನ ಗುರಿ ಪ್ರಧಾನಿ ನರೇಂದ್ರ ಮೋದಿ. ಅವರು ಹತ್ತು ವರ್ಷ ಏನು ಬಿಡುಗಡೆ ಮಾಡಿದ್ದಾರೆ, ನೀವೇನು ಬಿಡುಗಡೆ ಮಾಡಿದ್ದೀರಿ ದಾಖಲೆ‌ ಮುಂದಿಡಿ ಎಂದು ಅಶೋಕ್ ಸವಾಲು ಹಾಕಿದರು.

 

Related