ನಡ್ಡಾ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ

ನಡ್ಡಾ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ

ಕೋಲ್ಕತ್ತಾದಿಂದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ.

ನಡ್ಡಾ ಅವರ ಜತೆಗಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರ ಕಾರಿನ ಮೇಲೂ ದಾಳಿ ಮಾಡಲಾಯಿತು ಎಂದು ಬಿಜೆಪಿ ಮೂಲಗಳು ತಿಳಿಸಿ, ಘಟನೆಯಲ್ಲಿ  ತಂಡದೊಂದಿಗೆ  ತೆರಳುತ್ತಿದ್ದ ಮಾಧ್ಯಮದವರ ವಾಹನಗಳಿಗೂ ಹಾನಿಯಾಗಿದೆ ಎಂದು ತಿಳಿಸಿದರು.

ಈ ಮೂಲಕ ಟಿಎಂಸಿ ಅವರ ನಿಜ ಬಣ್ಣ ಬಯಲಾಗಿದೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡ ದಿಲೀಪ್ ಘೋಷ್ ತಿಳಿಸಿದ್ದಾರೆ. ತಕ್ಷಣ ಮಧ್ಯ ಪ್ರವೇಶಿಸಿದ ಪೊಲೀಸರು, ಬೆಂಗಾವಲು ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Related