ಹಾಸನ , ಫೆ. 22 : ಶಿವರಾತ್ರಿ ಹಬ್ಬದ ಪ್ರಯುಕ್ತ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಮ್ಮ ಸ್ವಗ್ರಾಮ ಹರದನಹಳ್ಳಿಯ ಮನೆದೇವರಾದ ಈಶ್ವರನ ದೇವಸ್ಥಾನದಲ್ಲಿ ರಾತ್ರಿ ಒಂದು ಗಂಟೆವರೆಗೂ ಜಾಗರಣೆ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಿನ್ನೆ ಸಂಜೆ ಹಾಸನ ನಗರದಲ್ಲಿರುವ ನಿವಾಸಕ್ಕೆ ಪತ್ನಿ ಚನ್ನಮ್ಮ ಅವರೊಂದಿಗೆ ಆಗಮಿಸಿದ ದೇವೇಗೌಡರು ಮೊದಲು ಮನೆಯಲ್ಲಿ ಪೂಜೆ ಸಲ್ಲಿಸಿದರು.
ನಂತರ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶಿವರಾತ್ರಿ ಹಬ್ಬದ ಪ್ರಯುಕ್ತ ತಮ್ಮ ಸ್ವಗ್ರಾಮ ಹರದನಹಳ್ಳಿಗೆ ಕುಟುಂಬ ಸಮೇತ ತೆರಳಿ ದೇವೇಗೌಡರು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶಿವರಾತ್ರಿ ಜಾಗರಣೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.