ನಂಗೆ ಚಿಕನ್ ಪಾಪ್ ಕಾರ್ನ್ ಬೇಕು

ನಂಗೆ ಚಿಕನ್ ಪಾಪ್ ಕಾರ್ನ್ ಬೇಕು

ಬೆಂಗಳೂರು, ಫೆ. 27 : ಅಮೂಲ್ಯಳಿಗೆ ಊಟಕ್ಕೆ ಚಪಾತಿ, ಅನ್ನ ಸಾಂಬಾರ್ ನೀಡಲಾಗಿತ್ತು. ಆದರೆ ಊಟ ನೋಡಿದ ಅಮೂಲ್ಯ, ನನಗೆ ಇದೆಲ್ಲಾ ಬೇಡ ಚಿಕನ್ ಪಾಪ್ ಕಾರ್ನೇ ಬೇಕು ಹಠ ಹಿಡಿದಿದ್ದಾಳೆ. ನೀವು ತಂದು ಕೊಡ್ತಿರೋ ಇಲ್ಲ ಮಮ್ಮಿಗೆ ಹೇಳಿ ನಾನೇ ತರಿಸಿಕೊಳ್ಳೋಲೊ ಅಂತ ಹೇಳಿದ್ದಾಳೆ. ಕೊನೆಗೆ ಪೊಲೀಸರು ಅನಿವಾರ್ಯವಾಗಿ ಚಿಕನ್ ಪಾಪ್ ಕಾರ್ನ್ ತಂದು ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಳ ವಿಚಾರಣೆ ನಡೆಯುತ್ತಿದೆ. ಹೀಗಾಗಿ ಪೊಲೀಸ್ ಠಾಣೆಗೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಇನ್ನೂ ಠಾಣೆಗೆ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಿಲ್ಲ. ದೂರುದಾರರಿಗೂ ಪೊಲೀಸರು ನಾಳೆ ಬನ್ನಿ ಎಂದು ಹೇಳಿ ಕಳುಹಿಸುತ್ತಿದ್ದಾರೆ.

Related