ಕೈ ಪಕ್ಷದಿಂದ ಯಾವುದೇ ಅಭಿವೃದ್ಧಿ ಕೆಲಸವಾಗಿಲ್ಲ: ಈಶ್ವರಪ್ಪ

ಕೈ ಪಕ್ಷದಿಂದ ಯಾವುದೇ ಅಭಿವೃದ್ಧಿ ಕೆಲಸವಾಗಿಲ್ಲ: ಈಶ್ವರಪ್ಪ

ಗದಗ: ದೇಶದಲ್ಲಿ ಕಳೆದ 75 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದರೂ ಕೂಡ ಯಾವುದೇ ಅಭಿವೃದ್ಧಿ ಕೆಲಸವನ್ನು ಮಾಡಿಲ್ಲ. ಈಗ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡೋಕೆ ಕಾಂಗ್ರೆಸ್ ಪಕ್ಷಕ್ಕೆ ಆಗುತ್ತಾ ಎಂದು ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರು ಪ್ರಶ್ನಿಸಿದ್ದಾರೆ.

ಗದಗ ಜಿಲ್ಲೆಯ ಜಂತ್ಲಿಶಿರೂರ ಗ್ರಾಮದಲ್ಲಿ ಬಿಜೆಪಿ ಮುಖಂಡರ ನಿವಾಸದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,  ಪ್ರಧಾನಿ ನರೇಂದ್ರ ಮೋದಿಯವರು ಕೇವಲ 9 ವರ್ಷದ ಅವಧಿಯಲ್ಲಿ ಎಲ್ಲರ ಜನಮಾನಸದಲ್ಲಿ ನೆಲೆ ನಿಂತಿರುವ ದೇಶದ ಸಂಸ್ಕೃತಿ, ಧರ್ಮ ಉಳಿಸುವುದರ ಜತೆಗೆ ಸದೃಢ ಭಾರತ ನಿರ್ಮಾಣ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು.

ಇನ್ನು ಲೋಕಸಭಾ ಚುನಾವಣೆಗೆ ಹಾವೇರಿ ಕ್ಷೇತ್ರದಿಂದ ಕಾಂತೇಶ ಇರಲಿ, ಯಾರೇ ಇರಲಿ ಪಕ್ಷ ಟಿಕೆಟ್‌ ನೀಡಿದವರನ್ನು ಗೆಲ್ಲಿಸಲು ಪ್ರಯತ್ನಿಸುತ್ತೇನೆ. ನಾವೆಲ್ಲ ವ್ಯಕ್ತಿ ಜಾತಿಯಿಂದ ಗುರುತಿಸಿಕೊಳ್ಳದೇ ಪಕ್ಷ, ಚಿಹ್ನೆಯಿಂದ ಗುರುತಿಸಿಕೊಂಡಿದ್ದೇವೆ ಎಂದರು.

 

Related