ಬೆಂಗಳೂರು, ಫೆ. 26 : ನನಗೆ ಮುಜುಗರವಾಗುತ್ತಿದೆ ಎಂದು ಸಾರ್ವಜನಿಕವಾಗಿ ಅಧಿಕಾರಿಗಳಿಗೆ ಪತ್ರ ಬರೆದು ಬಿಬಿಎಂಪಿ ಮೇಯರ್ ಸುದ್ದಿ ಆಗಿದ್ದಾರೆ.
ಬಿಬಿಎಂಪಿಯ ಆಗುಹೋಗು, ಬಿಬಿಎಂಪಿಯಿಂದ ಸರ್ಕಾರಕ್ಕೆ ಹೋಗುವ ಕಡತ ಸೇರಿದಂತೆ ಬಿಬಿಎಂಪಿಯಲ್ಲಿ ಆಗುವ ಯಾವ ಕೆಲಸದ ಬಗ್ಗೆಯೂ ಮೇಯರ್ ಗೌತಮ್ ಕುಮಾರ್ ಅವರಿಗೆ ಮಾಹಿತಿ ಹೋಗುತ್ತಿಲ್ಲ ಎನ್ನಲಾಗಿದೆ. ಹೀಗಾಗಿ ಮೇಯರ್ ನನಗೆ ಮುಜುಗರವಾಗುತ್ತಿದೆ.
ಮಾಧ್ಯಮದ ಜೊತೆ ಮಾತಾನಾಡುವಾಗ ನನ್ನ ಬಳಿ ಮಾಹಿತಿಯೇ ಇರಲ್ಲ, ನನಗೆ ಇನ್ಮುಂದೆ ಎಲ್ಲಾ ಬಿಬಿಎಂಪಿಯ ಮಾಹಿತಿ ಕೊಡಬೇಕು ಎಂದು ಅಧಿಕಾರಿಗಳಿಗೆ ಸಿಟ್ಟಿಗೆದ್ದು ಪತ್ರ ಬರೆದಿದ್ದಾರೆ.
ಹೊರಗೆ ಚನ್ನಾಗಿ ನಗುನಗುತ್ತಾ ಪೋಸ್ ಕೊಡುವ ಬೆಂಗಳೂರು ಮೇಯರ್ ಕಮೀಷನರ್ ಒಳಗೊಳಗೆ ಕಿತ್ತಾಡ್ತಾರೆ ಎನ್ನುವ ಸುದ್ದಿ ಬಿಬಿಎಂಪಿಯಲ್ಲಿ ಹೆಚ್ಚಾಗಿದೆ. ಹೀಗಾಗಿ ಯೋಜನೆ ವಿವರ, ಗುತ್ತಿಗೆ ಮಾಹಿತಿ, ಅದರ ವ್ಯಾಜ್ಯಗಳು, ಕಾನೂನು ಕೋಶದ ಮಾಹಿತಿ ಯಾವುದು ಇರಲ್ಲ ಎಂದು ಪತ್ರವನ್ನು ಕಮೀಷನರ್ಗೂ ರವಾನಿಸಿದ್ದಾರೆ.