ಶಿಕ್ಷಣದಲ್ಲಿ ಯಾವುದೇ ಸರ್ಕಾರ ಆದರೂ ರಾಜಕೀಯ ಮಾಡಬಾರದು

ಶಿಕ್ಷಣದಲ್ಲಿ ಯಾವುದೇ ಸರ್ಕಾರ ಆದರೂ ರಾಜಕೀಯ ಮಾಡಬಾರದು

ಶಿವಮೊಗ್ಗ: ಶಿಕ್ಷಣದಲ್ಲಿ ಕೇಂದ್ರ ಅಥವಾ ರಾಜ್ಯದಲ್ಲಿ ಯಾವುದೇ ಸರ್ಕಾರ ಇದ್ದರೂ ಕೂಡ ಅದು ರಾಜಕೀಯ ಮಾಡಬಾರದು. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಆದ್ದರಿಂದ ಯಾವುದೇ ಸರ್ಕಾರ ಇದ್ದರೂ ಕೂಡ ಶಿಕ್ಷಣದ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳಬೇಕಾದರೆ ಹಲವಾರು ಬಾರಿ ಯೋಚಿಸಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಹೇಳಿದರು.

ಶಿವಮೊಗ್ಗದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣದಲ್ಲಿ ಯಾವುದೇ ಸರ್ಕಾರ ಇದ್ದರೂ ಕೂಡ ಶಿಕ್ಷಣದ ಬಗ್ಗೆ ಗಂಭೀರವಾಗಿ ತೀರ್ಮಾನಗಳನ್ನು ಕೈಗೊಳ್ಳಬೇಕು ಇದರಿಂದ ವಿದ್ಯಾರ್ಥಿಗಳ ಜೀವನ ನಿಂತಿರುತ್ತದೆ ಹಾಗಾಗಿ ಮನ ಬಂದಂತೆ ಶಿಕ್ಷಣ ಬದಲಾಯಿಸುವುದು ಸರಿ ಅಲ್ಲ ಎಂದು ಹೇಳಿದ್ದಾರೆ

ಹಿಂದಿನ ಬಿಜೆಪಿ ಸರ್ಕಾರ ಶಿಕ್ಷಣ ನೀತಿಯಲ್ಲಿ ಎಡವಟ್ಟು ಮಾಡಿತ್ತು ಆ ಎಡಗಟ್ಟನ್ನು ನಮ್ಮ ಕಾಂಗ್ರೆಸ್ ಸರ್ಕಾರ ಮತ್ತೆ ಈಗ ತಿದ್ದುಪಡೆ ಮಾಡಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಬೇಕೆಂದರೆ ಸತತವಾಗಿ ಶಿಕ್ಷಣದ ಕಡೆ ಗಮನಹರಿಸಬೇಕು ಹೊರತಾಗಿ ಕಾಲ ಹರಣ ಮಾಡಬಾರದೆಂದು ಈ ಸಂದರ್ಭದಲ್ಲಿ ಹೇಳಿದರು.

Related